ಪ್ರಧಾನಿ ಮೋದಿ ಮತ್ತು ವಿಜೆಮುನಿ (ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ಮೋದಿಗೆ ಲಂಕಾ ಮಾಜಿ ಸೈನಿಕನಿಂದ ಎಚ್ಚರಿಕೆ..!

27 ವರ್ಷಗಳ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದ ಶ್ರೀಲಂಕಾದ ಮಾಜಿ ಸೈನಿಕ ವಿಜಿಥಾ ರೋಹನ್ ವಿಜೆಮುನಿ ಇದೀಗ ಮತ್ತೆ...

ಕೊಲಂಬೋ: 27 ವರ್ಷಗಳ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದ ಶ್ರೀಲಂಕಾದ ಮಾಜಿ ಸೈನಿಕ ವಿಜಿಥಾ ರೋಹನ್ ವಿಜೆಮುನಿ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಆತ ಎಚ್ಚರಿಕೆ ನೀಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀಲಂಕಾ ಪ್ರವಾಸದ ಹಿನ್ನಲೆಯಲ್ಲಿ ಮಾತನಾಡಿರುವ ಶ್ರೀಲಂಕಾದ ಮಾಜಿ ಸೈನಿಕ ವಿಜಿಥಾ ರೋಹನ್ ವಿಜೆಮುನಿ, ನರೇಂದ್ರ ಮೋದಿ ಅವರು ಶ್ರೀಲಂಕಾದ ಆಂತರಿಕ ವಿಚಾರಗಳನ್ನು ಕೆದಕುವ ಮೂಲಕ ದೇಶದಲ್ಲಿ ಮತ್ತೆ ಅಶಾಂತಿ ನೆಲೆಸುವಂತೆ ಮಾಡಬಾರದು ಎಂದು ಹೇಳಿದ್ದಾನೆ.

ಖಾಸಗಿ ಇಂಗ್ಲೀಷ್ ವೃತ್ತಪತ್ರಿಕೆಯೊಂದರ ಜತೆ ಮಾತನಾಡುತ್ತಿದ್ದ ವಿಜೆಮುನಿ, "ನಾನು ನರೇಂದ್ರ ಮೋದಿಯವರನ್ನು ಗೌರವಿಸುತ್ತೇನೆ. ಏಕೆಂದರೆ ಅವರು ಉತ್ತಮ ವ್ಯಕ್ತಿಯಾಗಿದ್ದು, ಅವರು ನಮ್ಮ ದೇಶಕ್ಕೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಆದರೆ ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ನರೇಂದ್ರ ಮೋದಿ ಅವರು ತಲೆಹಾಕುವ ಹಾಕಿಲ್ಲ. ಭಾರತದ ಪ್ರಧಾನಿ ನಮ್ಮ ಕ್ಷೇತ್ರಿಯ ಅಖಂಡತೆಯನ್ನು ಗೌರವಿಸಬೇಕು. ಮೋದಿಯವರು ಸಹ ರಾಜೀವ್ ಗಾಂಧಿಯವರಂತೆ ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಿದರೆ ತಮಿಳರ ಸಮಸ್ಯೆ ಮತ್ತೆ ಉದ್ಭವಿಸುತ್ತದೆ. ಲಂಕಾದಲ್ಲಿ ಶಾಂತಿಯನ್ನು ಉಳಿಸುವಂತಹ ಸಂಬಂಧವನ್ನು ಮೋದಿಯವರು ನಮ್ಮ ಜತೆ ಬೆಳೆಸಬೇಕು" ಎಂದು ಮಾಜಿ ಸೈನಿಕ ವಿಜೆಮುನಿ ಹೇಳಿದ್ದಾನೆ.

ಅಂದಿನ ಕಾಲಕ್ಕೆ ಶ್ರೀಲಂಕಾದ ಸೈನಿಕನಾಗಿದ್ದ ವಿಜೆಮುನಿ 1988ರಲ್ಲಿ ಕೊಲಂಬೋದಲ್ಲಿ ಅಂದಿನ ಭಾರತದ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದ. ಆ ಕಾರಣಕ್ಕೆ ಆತನನ್ನು ಸೈನ್ಯದಿಂದ ವಜಾಗೊಳಿಸಲಾಗಿತ್ತು. ನಂತರ ಆತ ಜ್ಯೋತಿಷಿಯಾಗಿ ಪ್ರಖ್ಯಾತನಾಗಿದ್ದ.

ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, 2008ರಲ್ಲಿ ಪೂರ್ವ ಪ್ರಧಾನಿ ಮನಮೋಹನ್ ಸಿಂಗ್ ಸಾರ್ಕ್ ಶೃಂಗ ಸಭೆಯಲ್ಲಿ ಭಾಗವಹಿಸಲು ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಆದರೆ ಆಗ ದ್ವಿಪಕ್ಷೀಯ ಮಾತುಕತೆ ನಡೆದಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

SCROLL FOR NEXT