ಪ್ರಧಾನಿ ಮೋದಿ ಮತ್ತು ವಿಜೆಮುನಿ (ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ಮೋದಿಗೆ ಲಂಕಾ ಮಾಜಿ ಸೈನಿಕನಿಂದ ಎಚ್ಚರಿಕೆ..!

27 ವರ್ಷಗಳ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದ ಶ್ರೀಲಂಕಾದ ಮಾಜಿ ಸೈನಿಕ ವಿಜಿಥಾ ರೋಹನ್ ವಿಜೆಮುನಿ ಇದೀಗ ಮತ್ತೆ...

ಕೊಲಂಬೋ: 27 ವರ್ಷಗಳ ಹಿಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದ ಶ್ರೀಲಂಕಾದ ಮಾಜಿ ಸೈನಿಕ ವಿಜಿಥಾ ರೋಹನ್ ವಿಜೆಮುನಿ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಆತ ಎಚ್ಚರಿಕೆ ನೀಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀಲಂಕಾ ಪ್ರವಾಸದ ಹಿನ್ನಲೆಯಲ್ಲಿ ಮಾತನಾಡಿರುವ ಶ್ರೀಲಂಕಾದ ಮಾಜಿ ಸೈನಿಕ ವಿಜಿಥಾ ರೋಹನ್ ವಿಜೆಮುನಿ, ನರೇಂದ್ರ ಮೋದಿ ಅವರು ಶ್ರೀಲಂಕಾದ ಆಂತರಿಕ ವಿಚಾರಗಳನ್ನು ಕೆದಕುವ ಮೂಲಕ ದೇಶದಲ್ಲಿ ಮತ್ತೆ ಅಶಾಂತಿ ನೆಲೆಸುವಂತೆ ಮಾಡಬಾರದು ಎಂದು ಹೇಳಿದ್ದಾನೆ.

ಖಾಸಗಿ ಇಂಗ್ಲೀಷ್ ವೃತ್ತಪತ್ರಿಕೆಯೊಂದರ ಜತೆ ಮಾತನಾಡುತ್ತಿದ್ದ ವಿಜೆಮುನಿ, "ನಾನು ನರೇಂದ್ರ ಮೋದಿಯವರನ್ನು ಗೌರವಿಸುತ್ತೇನೆ. ಏಕೆಂದರೆ ಅವರು ಉತ್ತಮ ವ್ಯಕ್ತಿಯಾಗಿದ್ದು, ಅವರು ನಮ್ಮ ದೇಶಕ್ಕೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಆದರೆ ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ನರೇಂದ್ರ ಮೋದಿ ಅವರು ತಲೆಹಾಕುವ ಹಾಕಿಲ್ಲ. ಭಾರತದ ಪ್ರಧಾನಿ ನಮ್ಮ ಕ್ಷೇತ್ರಿಯ ಅಖಂಡತೆಯನ್ನು ಗೌರವಿಸಬೇಕು. ಮೋದಿಯವರು ಸಹ ರಾಜೀವ್ ಗಾಂಧಿಯವರಂತೆ ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಿದರೆ ತಮಿಳರ ಸಮಸ್ಯೆ ಮತ್ತೆ ಉದ್ಭವಿಸುತ್ತದೆ. ಲಂಕಾದಲ್ಲಿ ಶಾಂತಿಯನ್ನು ಉಳಿಸುವಂತಹ ಸಂಬಂಧವನ್ನು ಮೋದಿಯವರು ನಮ್ಮ ಜತೆ ಬೆಳೆಸಬೇಕು" ಎಂದು ಮಾಜಿ ಸೈನಿಕ ವಿಜೆಮುನಿ ಹೇಳಿದ್ದಾನೆ.

ಅಂದಿನ ಕಾಲಕ್ಕೆ ಶ್ರೀಲಂಕಾದ ಸೈನಿಕನಾಗಿದ್ದ ವಿಜೆಮುನಿ 1988ರಲ್ಲಿ ಕೊಲಂಬೋದಲ್ಲಿ ಅಂದಿನ ಭಾರತದ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೆ ಹಲ್ಲೆ ನಡೆಸಿದ್ದ. ಆ ಕಾರಣಕ್ಕೆ ಆತನನ್ನು ಸೈನ್ಯದಿಂದ ವಜಾಗೊಳಿಸಲಾಗಿತ್ತು. ನಂತರ ಆತ ಜ್ಯೋತಿಷಿಯಾಗಿ ಪ್ರಖ್ಯಾತನಾಗಿದ್ದ.

ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, 2008ರಲ್ಲಿ ಪೂರ್ವ ಪ್ರಧಾನಿ ಮನಮೋಹನ್ ಸಿಂಗ್ ಸಾರ್ಕ್ ಶೃಂಗ ಸಭೆಯಲ್ಲಿ ಭಾಗವಹಿಸಲು ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಆದರೆ ಆಗ ದ್ವಿಪಕ್ಷೀಯ ಮಾತುಕತೆ ನಡೆದಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT