ದೇಶ

ಸಾಲ ಮನ್ನಾಕ್ಕೆ ದ್ರಾಕ್ಷಿ ರೈತರ ಮೊರೆ

ನವದೆಹಲಿ: ದ್ರಾಕ್ಷಿ ಬೆಳೆಗಾರರ ಸಾಲ ಮತ್ತು ಬಡ್ಡಿ ಮನ್ನಾ ಮಾಡಬೇಕು ಹಾಗೂ ಬೆಳೆಗಾರರಿಗೆ ವಿಶೇಷ ಪ್ಯಾಕೆಜ್ ನೀಡಬೇಕು ಎಂದು ಕರ್ನಾಟಕದ ದ್ರಾಕ್ಷಿ ಬೆಳೆಗಾರರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ್, ಸುರೇಶ್ ಅಂಗಡಿ, ಭಗವಂತ ಖೂಬಾ ನೇತೃತ್ವದಲ್ಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಸಂಜೀವ್‍ಕುಮಾರ್ ಬಲ್ಯಾನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಷ್ಟ್ರೀಯ ತೋಟಗಾರಿಕೆ ಮಿಷನ್(ಎನ್‍ಎಚ್ ಎಂ) ಶಾಖಾ ಕಚೇರಿಯನ್ನು ಉತ್ತರ ಕರ್ನಾಟಕ ಪ್ರದೇಶದಲ್ಲಿ ತೆರೆಯ ಬೇಕು. ರಾಷ್ಟ್ರೀಯ ದ್ರಾಕ್ಷಿ ಸಂಶೋ ಧನಾ ಕೇಂದ್ರವನ್ನು ವಿಜಯಪುರದಲ್ಲಿ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದಿಡಲಾಗಿದೆ.

ಮಾಜಿ ಸಚಿವ ಬಸನಗೌಡ ಪಾಟೀಲ್, ದ್ರಾಕ್ಷಿಬೆಳೆಗಾರರ ಸಂಘದ ಅಧ್ಯಕ್ಷ ಅಭಯ್ ಕುಮಾರ್ ಎಸ್. ನಂದ್ರೇಕರ್, ಕಾರ್ಯದರ್ಶಿ ಎಚ್. ಆರ್. ಉಟಗಿ ಮತ್ತಿತರರು ಉಪಸ್ಥಿತರಿದ್ದರು.

SCROLL FOR NEXT