ಪ್ರಧಾನಿ ಮೋದಿ 
ದೇಶ

ಶ್ರೀಲಂಕಾ ಪ್ರಗತಿಗೆ ಭಾರತ ಕೈಜೋಡಿಸಲಿದೆ: ಪ್ರಧಾನಿ ಮೋದಿ

ಕೊಲಂಬೊ: ಶ್ರೀಲಂಕಾ ಪ್ರಗತಿಯಲ್ಲಿ ಭಾರತ ಕೈ ಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಶ್ರೀಲಂಕಾ ಸಂಸತ್‌ನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಶ್ರೀಲಂಕಾ ದಶಗಳ ಕಾಲ ಉಗ್ರವಾದವನ್ನು ಅನುಭವಿಸಿದೆ. ನಾವೂ ಅತಿ ಕೆಟ್ಟ ಹಾಗೂ ಕ್ರೂರ ಉಗ್ರವಾದವನ್ನು ಸಮರ್ಥವಾಗಿ ಎದುರಿಸಿದ್ದೇವೆ. ವಿವಿಧತೆಯಲ್ಲಿ ಏಕತೆ ಎಲ್ಲಾ ದೇಶಗಳ ಅದ್ಭುತ ಶಕ್ತಿ ಎಂದು ಹೇಳಿದರು.

ಏಕತೆ ಮತ್ತು ಅಖಂಡತೆಗೆ ಶ್ರೀಲಂಕಾ ಮಾದರಿಯಾಗಿದೆ ಎಂದ ಪ್ರಧಾನಿ, ಉಭಯ ರಾಷ್ಟ್ರಗಳ ಮಧ್ಯೆ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಬಂಡವಾಳ ಹೂಡಿಕೆ ಮಾಡಲು ಶ್ರೀಲಂಕಾಗೆ ಭಾರತ ನೈಸರ್ಗಿಕ ಮೂಲವಾಗಿದೆ ಎಂದರು.

ಇದೇ ವೇಳೆ ಮೀನುಗಾರರ ವಿಚಾರ ಪ್ರಸ್ತಾಪಿಸಿದ ಮೋದಿ, ಸಮುದ್ರ ರಕ್ಷಣೆ ಬಗ್ಗೆ ನಾಗರಿಕರು ಗಮನ ಹರಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT