ಪಾಕ್ ವಿರುದ್ಧ ಪ್ರತಿಭಟಿಸುತ್ತಿರುವ ಹಿಂದು ಸೇನಾ ಕಾರ್ಯಕರ್ತರು (ಸಂಗ್ರಹ ಚಿತ್ರ) 
ದೇಶ

ಲಖ್ವಿ ಬಿಡುಗಡೆಗೆ ತೀವ್ರ ವಿರೋಧ, ಪಾಕ್ ವೈಫಲ್ಯ ಖಂಡಿಸಿದ ಭಾರತ

ನವದೆಹಲಿ: ಪಾಕಿಸ್ತಾನ ಕೋರ್ಟ್ ಮುಂಬೈ ದಾಳಿಯ ಪ್ರಮುಖ ರೂವಾರಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿ ಬಿಡುಗಡೆ ಆದೇಶಿಸಿರುವ ಕ್ರಮವನ್ನು ಭಾರತ ತೀವ್ರವಾಗಿ ವಿರೋಧಿಸಿದೆ. ಅಲ್ಲದೆ ಈ ಪ್ರಕರಣದಲ್ಲಿ ಪಾಕ್ ಸರ್ಕಾರದ ವೈಫಲ್ಯವನ್ನು ಸಹ ಭಾರತ ಖಂಡಿಸಿದೆ.

ಈ ಸಂಬಂಧ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಾಸಿತ್ ಅವರನ್ನು ಸೌತ್ ಬ್ಲಾಕ್‌ಗೆ ಕರೆಯಿಸಿಕೊಂಡ ಭಾರತದ ಪ್ರಭಾರ ವಿದೇಶಾಂಗ ಕಾರ್ಯದರ್ಶಿ ಅನಿಲ್ ವಾಧ್ವಾ ಅವರು, ಲಖ್ವಿ ಜೈಲನಿಂದ ಹೊರಗೆ ಬಾರದಂತೆ ನೋಡಿಕೊಳ್ಳುವುದು ಪಾಕಿಸ್ತಾನ ಸರ್ಕಾರದ ಜವಾಬ್ದಾರಿಯಾಗಿತ್ತು ಎಂದು ಎಚ್ಚರಿಸಿದ್ದಾರೆ.

ಮುಂಬೈ ದಾಳಿಯ ರೂವಾರಿ ಉಗ್ರ ಲಖ್ವಿಯ ಬಿಡುಗಡೆ ಆದೇಶದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಾಧ್ವಾ, ಪಾಕಿಸ್ತಾನದ ಈ ಬೇಜವಾಬ್ದಾರಿ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಎಸ್. ಜೈ ಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿದೇಶ ಪ್ರವಾಸದಲ್ಲಿರುವುದರಿಂದ, ಅವರ ಅನುಪಸ್ಥಿತಿಯಲ್ಲಿ ವಾಧ್ವಾ ಅವರು ಪಾಕ್ ಹೈಕಮಿಷನರ್ ಅವರನ್ನು ಕಚೇರಿಗೆ ಕರೆಯಿಸಿಕೊಂಡು, ಉಗ್ರನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನ

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

SCROLL FOR NEXT