ದೇಶ

ಆಫ್ರಿಕನ್ನರ ಮೇಲೆ ಹಲ್ಲೆ: ಒಂಬತ್ತು ಮಂದಿ ಸೆರೆ

ಕೊತ್ತನೂರು ಹಾಗೂ ಹೆಣ್ಣೂರಿನಲ್ಲಿ ಆಫ್ರಿಕಾ ಮೂಲದ ಪ್ರಜೆಗಳ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ 9 ಆರೋಪಿಗಳನ್ನು ಈಶಾನ್ಯ ವಿಭಾಗ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ಕೊತ್ತನೂರು ಹಾಗೂ ಹೆಣ್ಣೂರಿನಲ್ಲಿ ಆಫ್ರಿಕಾ ಮೂಲದ ಪ್ರಜೆಗಳ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ 9 ಆರೋಪಿಗಳನ್ನು ಈಶಾನ್ಯ ವಿಭಾಗ ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರಿನ ರಮೇಶ್ ಹಾಗೂ ವಿಜಯ್ ಕುಮಾರ್, ಕಿರಣ್, ಜೋಸೆಫ್, ದಯಾನಂದ, ಜೇಮ್ಸ್,  ಲಾರ್ಡ್ಸ್, ಬಾಲಾಕುಮಾರ್, ಭಾನುಪ್ರಕಾಶ್ ಬಂಧಿತರು. ಭೈರತಿ ಸಮೀಪ ಐವರಿ ಕೋಸ್ಟ್ ದೇಶದವರ ಮೇಲೆ ಹಲ್ಲೆ ನಡೆದ ಸಂಬಂಧ ಕೊತ್ತನೂರು ಠಾಣೆಯಲ್ಲಿ, ಹೆಣ್ಣೂರಿನಲ್ಲಿರುವ ಹೊಟೇಲ್ ಗೆ ನುಗ್ಗಿ ಆಫ್ರಿಕಾ ಮೂಲದ ಪ್ರಜೆ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಆಫ್ರಿಕಾ ಪ್ರಜೆಗಳು ಈ ಪ್ರದೇಶದಲ್ಲಿ ಗಲಾಟೆ, ಕಿರುಚಾಟ ಮಾಡುವುದು ಹಾಗೂ ಸ್ಥಳೀಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಆದರೂ, ಗಲಾಟೆ ಮುಂದುವರೆದ ಹಿನ್ನೆಲೆಯಲ್ಲಿ ಆರೋಪಿಗಳು ಕಾನೂನು ಕೈಗೆತ್ತಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT