ನಿತೀಶ್ ಕುಮಾರ್ 
ದೇಶ

ಭೂಸ್ವಾಧೀನ ಮಸೂದೆ ವಿರುದ್ಧ ನಿತೀಶ್ ನಿರಶನ ಆರಂಭ

ಪಾಟ್ನಾ: ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 24 ಗಂಟೆಗಳ ನಿರಶನ ಆರಂಭಿಸಿದ್ದಾರೆ.

ಭೂಸ್ವಾಧೀನ ಮಸೂದೆ ವಿರುದ್ಧ ಜೆಡಿಯು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದರ ಅಂಗವಾಗಿ ನಿತೀಶ್ ಕುಮಾರ್ ಅವರು ಇಂದು ಬೆಳಗ್ಗೆ ಪಕ್ಷದ ಕಚೇರಿಗೆ ಆಗಮಿಸಿ, ಯೋಗ ಮಾಡಿದ ಬಳಿಕ ನಿರಶನ ಆರಂಭಿಸಿದ್ದಾರೆ.

ಜೆಡಿಯು ರಾಜ್ಯಾಧ್ಯಕ್ಷ ಬಸಿಷ್ಠ ನಾರಾಯಣ್ ಸಿಂಗ್, ಹಿರಿಯ ಸಚಿವರಾದ ವಿಜಯ್ ಜೌಧರಿ, ಶಾಮ್ ರಜಾಕ್, ರಾಜಿವ್ ರಂಜನ್ ಸಿಂಗ್ ಲಲನ್ ಹಾಗೂ ಜೆಡಿಯು ಸಂಸದರಾದ ಅಲಿ ಅನ್ವರ್, ಹರ್ಬನ್ಸ್ ಸೇರಿದಂತೆ ಪಕ್ಷದ ಹಲವು ನಾಯಕರು ನಿತೀಶ್ ಕುಮಾರ್ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ಪಕ್ಷದ ಹಲವು ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಪಕ್ಷದ ಕಚೇರಿಯ ಆವರಣದಲ್ಲಿ ಉಪವಾಸ ನಡೆಸುತ್ತಿದ್ದಾರೆ.

ಈ ವೇಳೆ ಮಾತನಾಡಿದ ಜೆಡಿಯು ರಾಜ್ಯಾಧ್ಯಕ್ಷ ಬಸಿಷ್ಠ ನಾರಾಯಣ್ ಸಿಂಗ್ ಅವರು, ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ಗಾಂಧಿ ಮಾದರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT