ನಿತೀಶ್ ಕುಮಾರ್ 
ದೇಶ

ಭೂಸ್ವಾಧೀನ ಮಸೂದೆ ವಿರುದ್ಧ ನಿತೀಶ್ ನಿರಶನ ಆರಂಭ

ಪಾಟ್ನಾ: ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆ ವಿರುದ್ಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 24 ಗಂಟೆಗಳ ನಿರಶನ ಆರಂಭಿಸಿದ್ದಾರೆ.

ಭೂಸ್ವಾಧೀನ ಮಸೂದೆ ವಿರುದ್ಧ ಜೆಡಿಯು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದರ ಅಂಗವಾಗಿ ನಿತೀಶ್ ಕುಮಾರ್ ಅವರು ಇಂದು ಬೆಳಗ್ಗೆ ಪಕ್ಷದ ಕಚೇರಿಗೆ ಆಗಮಿಸಿ, ಯೋಗ ಮಾಡಿದ ಬಳಿಕ ನಿರಶನ ಆರಂಭಿಸಿದ್ದಾರೆ.

ಜೆಡಿಯು ರಾಜ್ಯಾಧ್ಯಕ್ಷ ಬಸಿಷ್ಠ ನಾರಾಯಣ್ ಸಿಂಗ್, ಹಿರಿಯ ಸಚಿವರಾದ ವಿಜಯ್ ಜೌಧರಿ, ಶಾಮ್ ರಜಾಕ್, ರಾಜಿವ್ ರಂಜನ್ ಸಿಂಗ್ ಲಲನ್ ಹಾಗೂ ಜೆಡಿಯು ಸಂಸದರಾದ ಅಲಿ ಅನ್ವರ್, ಹರ್ಬನ್ಸ್ ಸೇರಿದಂತೆ ಪಕ್ಷದ ಹಲವು ನಾಯಕರು ನಿತೀಶ್ ಕುಮಾರ್ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.

ಪಕ್ಷದ ಹಲವು ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಪಕ್ಷದ ಕಚೇರಿಯ ಆವರಣದಲ್ಲಿ ಉಪವಾಸ ನಡೆಸುತ್ತಿದ್ದಾರೆ.

ಈ ವೇಳೆ ಮಾತನಾಡಿದ ಜೆಡಿಯು ರಾಜ್ಯಾಧ್ಯಕ್ಷ ಬಸಿಷ್ಠ ನಾರಾಯಣ್ ಸಿಂಗ್ ಅವರು, ಕೇಂದ್ರ ಸರ್ಕಾರದ ಭೂಸ್ವಾಧೀನ ಮಸೂದೆಯ ವಿರುದ್ಧ ಗಾಂಧಿ ಮಾದರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT