ಅರುಣ್ ಜೇಟ್ಲಿ 
ದೇಶ

ರಾಹುಲ್ ಅಷ್ಟೇ ಅಲ್ಲ, ವಾಜಪೇಯಿ, ಸೋನಿಯಾ ಗಾಂಧಿಯನ್ನು ವಿಚಾರಣೆ ಮಾಡಲಾಗಿದೆ: ಜೇಟ್ಲಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಸರ್ಕಾರ 'ಗೂಢಚರ್ಯೆ' ನಡೆಸುತ್ತಿದೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಹಣಕಾಸು ಸಚಿವ..

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಕೇಂದ್ರ ಸರ್ಕಾರ 'ಗೂಢಚರ್ಯೆ' ನಡೆಸುತ್ತಿದೆ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ಅರ್ಥವಿಲ್ಲದ ವಿಷಯ ಪ್ರಸ್ತಾಪಿಸುತ್ತಿದೆ ಎಂದಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ಸರ್ಕಾರ ರಾಜಕೀಯ ಪಕ್ಷಗಳಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರುಣ್ ಜೇಟ್ಲಿ ಅವರು, ರಾಹುಲ್ ಗಾಂಧಿ ಅವರ ನಿವಾಸಕ್ಕೆ ದೆಹಲಿ ಪೊಲೀಸರು ತೆರಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ವಿವಿಐಪಿ ಭದ್ರತೆ ಬಗ್ಗೆ ಸದಾ ನಿಗಾ ಇಡುವುದೇ ಅವರ ಕೆಲಸ, ಪೊಲೀಸರು ಅವರ ಕೆಲಸ ಮಾಡಿದ್ದಾರೆ ಅದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

ಮನೆಗೆ ಹೋಗಿ ವಿಚಾರಣೆ ನಡೆಸುವುದು ಅವರ ಕರ್ತವ್ಯ, ರಾಹುಲ್ ಗಾಂಧಿ ಅಷ್ಟೇ ಅಲ್ಲ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಮನೆಗೂ ಹೋಗಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಜೇಟ್ಲಿ ಹೇಳಿದರು.

ಎನ್‌ಡಿಎ ಯುಪಿಎ ಸರ್ಕಾರದಲ್ಲೂ ಹಲವು ವಿವಿಐಪಿ ಮನೆಗಳಿಗೆ ಹೋಗಿ ಅವರ ಸುರಕ್ಷತೆ ಬಗ್ಗೆ ಪೊಲೀಸರು ವಿಚಾರಿಸಿದ್ದಾರೆ. ಮನೆಗೆ ಹೋದಾಕ್ಷಣ ಗೂಢಚರ್ಯೆ ಆಗುವುದಿಲ್ಲ ಎಂದು ಜೇಟ್ಲಿ ಸ್ಪಷ್ಟಪಡಿಸಿದರು.

1999ರಿಂದಲೂ ಈ ರೀತಿಯ ವಿಚಾರಣೆ ಜಾರಿಯಲ್ಲಿದೆ. ವಿವಿಐಪಿಗಳ ಭದ್ರತೆ ದೃಷ್ಟಿಯಿಂದ ವಿಚಾರಣೆ ನಡೆಸಲಾಗುತ್ತದೆ. ಎಲ್ಲರ ಮನೆಗೂ ಹೋದಂತೆ ರಾಹುಲ್ ಗಾಂಧಿ ಅವರ ಮನೆಗೂ ಹೋಗಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT