ಸ್ಪೀಕರ್ ಕುರ್ಚಿ 
ದೇಶ

ಕೇರಳ ವಿಧಾನಸಭೆಯಲ್ಲಿ ಗದ್ದಲ: ಐವರು ಎಲ್‌ಡಿಎಫ್ ಶಾಸಕರ ಅಮಾನತು

ಕೊಚ್ಚಿ: ಕೇರಳ ವಿಧಾನಸಭೆಯಲ್ಲಿ ಎರಡು ದಿನಗಳ ಹಿಂದಷ್ಟೆ ನಡೆದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಕೋಲಾಹಲಕ್ಕೆ ಸಂಬಂಧಿಸಿದಂತೆ ಸೋಮವಾರ ಐವರು ಎಲ್‌ಡಿಎಫ್ ಶಾಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.

ಕಳೆದ ಶುಕ್ರವಾರ ಬಜೆಟ್ ಅಧಿವೇಶನದ ವೇಳೆ ಸ್ಪೀಕರ್ ಕುರ್ಚಿ ಧ್ವಂಸಗೊಳಿಸಿದ ಆರೋಪದ ಮೇಲೆ ಎಲ್‌ಡಿಎಫ್‌ನ ಕೆ.ಕುಂಜಹಮ್ಮದ್ ಮಾಸ್ಟರ್, ಇಪಿ ಜಯರಾಜನ್, ಕೆ.ಅಜಿತ್ ಕೆ.ಟಿ. ಜಲೀಲ್ ಹಾಗೂ ವಿ ಶಿವನ್ ಕುಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ.

ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ಶಾಸಕರ ವಿರುದ್ಧ ಅಮಾನತು ಗೊತ್ತುವಳಿ ಮಂಡಿಸಿದರು.

ಈ ಮಧ್ಯೆ, ಸಿಪಿಐ-ಎಂ ನಾಯಕ ವಿ.ಎಸ್. ಅಚ್ಚುತಾನಂದನ್ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದನ್ನು 'ಏಕಪಕ್ಷಿಯ' ನಿರ್ಧಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷಗಳು, ಮಹಿಳಾ ಶಾಸಕರೊಂದಿಗೆ ಅಸಭ್ಯವಾಗಿ ವರ್ತಿಸಿದವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿವೆ.

ಕೇರಳ ವಿಧಾನಸಭೆಯಲ್ಲಿ ಹಣಕಾಸು ಸಚಿವ ಕೆ.ಎಂ ಮಾಣಿ ಬಜೆಟ್ ಮಂಡನೆ ವೇಳೆ ವಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದ್ದವು. ಮಾಣಿ ವಿರುದ್ಧ ಬಾರ್ ಲೈಸೆನ್ಸ್ ಗೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಮಾಣಿ ಅವರು ಬಜೆಟ್ ಮಂಡನೆ ಮಾಡದಂತೆ ವಿಪಕ್ಷ ಸಿಪಿಎಂ ತೀವ್ರ ಪ್ರತಿಭಟನೆ ನಡೆಸಿದೆ ಈ ನಡುವೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಸಿಪಿಎಂ ಶಾಸಕರು ಪರಸ್ಪರ ಕೈ ಕೈ ಮೀಲಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT