ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಶಿ 
ದೇಶ

ಗಾಂಧಿ ಜಯಂತಿ ರಜೆ ವಿವಾದ: ರಜಾದಿನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಅಗತ್ಯವಿದೆ ಆರ್ ಎಸ್ಎಸ್

ಗಾಂಧಿ ಜಯಂತಿ (ಅ.2) ಸಾವ್ರಜನಿಕ ರಜೆ ತೆಗೆದುಹಾಕಿರುವ ಗೋವಾ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ...

ನಾಗ್ಪುರ: ಗಾಂಧಿ ಜಯಂತಿ (ಅ.2) ಸಾರ್ವಜನಿಕ ರಜೆ ತೆಗೆದುಹಾಕಿರುವ ಗೋವಾ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಧಾನ ಕಾರ್ಯದರ್ಶಿ ಸುರೇಶ್ ಜೋಶಿ, ಗಾಂಧಿ ಜಯಂತಿ ರಜೆ ಕುರಿತಂತೆ ಗೋವಾ ಈ ರೀತಿಯ ತೀರ್ಮಾನ ಯಾವ ಕಾರಣಕ್ಕೆ ತೆಗೆದುಕೊಂಡಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ವಿವಾದ ಕುರಿತಂತೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಸುರೇಶ್ ಜೋಶಿ ಅವರು, ದೇಶದಲ್ಲಿ ಸಾರ್ವಜನಿಕ ರಜೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವುಗಳನ್ನು ಕಡಿತಗೊಳಿಸಬೇಕು ನಿಜ. ಆದರೆ, ಗಾಂಧಿ ಜಯಂತಿಯ ದಿನದಂದಿರುವ ಸಾರ್ವಜನಿಕ ರಜೆಯನ್ನು ಯಾವ ಕಾರಣಕ್ಕೆ ಗೋವಾ ಸರ್ಕಾರ ತೆಗೆದುಹಾಕಿದೆ ಎಂಬುದು ಅರ್ಥವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಹೇಳಿದ್ದಾರೆ.

ಗೋವಾ ಸರ್ಕಾರ ಗಾಂಧಿ ಜಯಂತಿ (ಅ.2)ಗೆ ಅಧಿಕೃತ ರಜೆ ನೀಡಿದೆಯೋ ಇಲ್ಲವೋ ಎಂಬ ವಿಚಾರದ ಬಗ್ಗೆ ಭಾನುವಾರ ಗೊಂದಲ ಉಂಟಾಗಿತ್ತು. ಮಧ್ಯಾಹ್ನದ ವೇಳೆಗೆ ಇದ್ದಕ್ಕಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಬಿಜೆಪಿ ಸರ್ಕಾರ ಅಧಿಕೃತ ರಜೆಗಳ ಪಟ್ಟಿಯಿಂದ ಗಾಂಧಿ ಜಯಂತಿಯನ್ನು ತೆಗೆದು ಹಾಕಿದೆ ಎಂಬ ಸುದ್ದಿಯನ್ನು ಪ್ರಸಾರ ಮಾಡಿತ್ತು. ಅಷ್ಟೇ ಅಲ್ಲದೆ, ಈ ಸುದ್ದಿ ಫೇಸ್‍ಬುಕ್, ಟ್ವಿಟರ್ ಸೇರಿದಂತೆ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ