ಆರ್‍ಎಸ್‍ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ 
ದೇಶ

ಶಿಕ್ಷಣಕ್ಕಿರಲಿ ಮಾತೃಭಾಷೆ

ಶಿಕ್ಷಣ ಮಾಧ್ಯಮವಾಗಿ ಮಾತೃಭಾಷೆಯೇ ಇರಲಿ. ವಿದೇಶಿ ಭಾಷೆಯ ಮಾಧ್ಯಮದಲ್ಲಿ ಶಿಕ್ಷಣ ಕೊಟ್ಟರೆ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯಿಂದ ದೂರವಾಗುತ್ತಾರೆ. ಹೀಗೆಂದು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ಆರ್ ಎಸ್‍ಎಸ್ ಸಲಹೆ ಮಾಡಿದೆ...

ನಾಗ್ಪುರ: ಶಿಕ್ಷಣ ಮಾಧ್ಯಮವಾಗಿ ಮಾತೃಭಾಷೆಯೇ ಇರಲಿ. ವಿದೇಶಿ ಭಾಷೆಯ ಮಾಧ್ಯಮದಲ್ಲಿ ಶಿಕ್ಷಣ ಕೊಟ್ಟರೆ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯಿಂದ ದೂರವಾಗುತ್ತಾರೆ. ಹೀಗೆಂದು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ಆರ್ ಎಸ್‍ಎಸ್ ಸಲಹೆ ಮಾಡಿದೆ.

ಭಾನುವಾರ ನಾಗ್ಪುರದಲ್ಲಿ ಮುಕ್ತಾಯಗೊಂಡ ಮೂರು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‍ಎಸ್‍ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ ಈ ಮಾಹಿತಿ ನೀಡಿದ್ದಾರೆ. ದೇಶದ ಪ್ರಮುಖ ನಾಯಕರಾಗಿದ್ದ ಮಹಾತ್ಮಾ ಗಾಂಧಿ, ಎಂ.ಎಂ. ಮಾಳವೀಯ, ರವೀಂದ್ರನಾಥ್ ಠಾಗೋರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸೇರಿ ಪ್ರಮುಖರು ಮಾತೃಭಾಷೆಯಲ್ಲಿಯೇ ಶಿಕ್ಷಣ ಪಡೆದಿದ್ದರು. ಅವರು ಜಗದ್ವಿಖ್ಯಾತರಾದರು ಎಂದು ಸುರೇಶ್ ಭಯ್ಯಾಜಿ ಜೋಶಿ ತಿಳಿಸಿದ್ದಾರೆ.

ಮಂದಿರ ಬಿಟ್ಟಿಲ್ಲ: ಅಯೋಧ್ಯೆ ರಾಮಮಂದಿರ ನಿರ್ಮಾಣ ವಿಚಾರ ಕೈಬಿಟ್ಟಿಲ್ಲ. ಅದಕ್ಕಾಗಿ ದೇಶಾದ್ಯಂತ ಹೊಸ ಆಂದೋಲನ ಬೇಕಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಹಿಂದೂಗಳ ಪರ ತೀರ್ಪು ನೀಡಿದೆ. ಇದೀಗ ಪ್ರಕರಣ ಸುಪ್ರೀಂ ಕೋರ್ಟಲ್ಲಿರುವುದರಿಂದ ದೇಗುಲ ನಿರ್ಮಾಣ ಪ್ರಕ್ರಿಯೆ ವಿಳಂಬವಾಗಬಹುದು ಎಂದಿದ್ದಾರೆ ಅವರು.
 
ಗೋ ತಳಿಗೆ ಆದ್ಯತೆ: ಸಂಘಟನೆ ದೇಶಿ ಗೋ ತಳಿ ಸಂರಕ್ಷಿಸಲು ಕಟಿಬದಟಛಿವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಕೇವಲ ಕಾನೂನಿನಿಂದ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೀಗಾಗಿ, ಗೋ ತಳಿ ರಕ್ಷಣೆಗೆ ಜಾಗೃತಿಯೂ ಅಗತ್ಯ ಎಂದರು.

ಅನಾಹುತವಾಗಿಲ್ಲ: ಹಿಂದೂ ಪರ ಸಂಘಟನೆಗಳು ಘರ್ ವಾಪಸಿ (ಮರು ಮತಾಂತರ) ಬಗ್ಗೆ ಮಾತನಾಡುವುದರಿಂದ ಅನಾಹುತವೇನೂ ಆಗಿಲ್ಲ. ಹಿಂದುತ್ವದ ಬಗ್ಗೆ ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಭಯ್ಯಾಜಿ ಪ್ರಶ್ನಿಸಿದರು. ಜಮ್ಮು-ಕಾಶ್ಮೀರದಲ್ಲಿನ ಬಿಜೆಪಿ-ಪಿಡಿಪಿ ಸರ್ಕಾರದ ಮೌಲ್ಯಮಾಪನ ಮಾಡುವುದಿಲ್ಲ. ಬಿಜೆಪಿ ನಾಯಕರು ಹೇಳಿದ್ದನ್ನು ಕೇಳಿಸಿಕೊಂಡು, ಅಗತ್ಯ ಬಿದ್ದರೆ ಸಲಹೆ ನೀಡುತ್ತೇವೆ ಎಂದು ಭಯ್ಯಾಜಿ ಜೋಶಿ ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!