ದೇಶ

ಹಿಸಾರ್ ಚರ್ಚ್ ಧ್ವಂಸ: ಪ್ರಮುಖ ಆರೋಪಿ ಬಂಧನ

Vishwanath S
ನವದೆಹಲಿ: ಹಿಸಾರ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್ ಅನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಪ್ರಮುಖ ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ.

ಹಿಸಾರ್ ನಲ್ಲಿ ಪ್ರಮುಖ ಆರೋಪಿ ಅನಿಲ್ ಗೋದಾರಾನನ್ನು ಬಂಧಿಸಲಾಗಿದೆ ಎಂದು ಹಿಸಾರ್ ಪೊಲೀಸ್ ವರಿಷ್ಠಾಧಿಕಾರಿ ಸೌರಭ್ ಸಿಂಗ್ ತಿಳಿಸಿದ್ದಾರೆ. 

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಮನವಿ ಮಾಡಿಕೊಳ್ಳಲಾಗುವುದು ಎಂದರು. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿರುವುದಾಗಿ ತಿಳಿಸಿದ್ದಾರೆ.



SCROLL FOR NEXT