ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ 
ದೇಶ

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಸಮುದಾಯಗಳ ನಡುವೆ ಘರ್ಷಣೆ ಸೃಷ್ಟಿಸುತ್ತದೆ: ಪಿಡಿಪಿ

ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಮಂಗಳವಾರ ಹೇಳಿದೆ...

ನವದೆಹಲಿ: ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಮಂಗಳವಾರ ಹೇಳಿದೆ.

ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು. ನನ್ನ ಈ ಹೇಳಿಕೆಗೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ, ಚರ್ಚಿಸಲು ನಾನು ಸಿದ್ಧನಿದ್ದೇನೆ. ಏಕೆಂದರೆ ಈ ಮಾಹಿತಿ ನನಗೆ ಸೌದಿ ಅರೇಬಿಯಾದ ಜನರಿಂದಲೇ ತಿಳಿದುಬಂದಿದ್ದು ಎಂದು ವಿವಾದ್ಮಕ ಹೇಳಿಕೆಯೊಂದನ್ನು ನೀಡಿದ್ದರು.

ಸುಬ್ರಹ್ಮಣ್ಯನ್ ಸ್ವಾಮಿ ಅವರ ಈ ಹೇಳಿಕೆ ದೇಶಾದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಾದ ಕುರಿತಂತೆ ಪಿಡಿಪಿಯ ವಕ್ತಾರ ನಯೀಮ್ ಅಖ್ತರ್ ಪ್ರತಿಕ್ರಿಯೆ ನೀಡಿದ್ದು, ಸುಬ್ರಹ್ಮಣ್ಯನ್ ಸ್ವಾಮಿ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಉನ್ನತ ಸ್ಥಾನದಲ್ಲಿರುವಂತ ಅಧಿಕಾರಿಗಳು ಈ ರೀತಿಯ ಹೇಳಿಕೆ ನೀಡುವುದು ತಪ್ಪು. ಈ ರೀತಿಯ ಹೇಳಿಕೆಗಳು ಸಮುದಾಯಗಳ ನಡುವೆ ದಂಗೆ ಏರ್ಪಡುವಂತೆ ಮಾಡುತ್ತದೆ. ಈ ಹೇಳಿಕೆಯನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸುವಂತೆ ಮನವಿ ಇಡಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT