ದೇಶ

ಕಪ್ಪು ಹಣ: ಪರಿಣಾಮಕಾರಿ ಕಾನೂನು ಜಾರಿಗೆ ಕೇಂದ್ರದಿಂದ ಒಪ್ಪಿಗೆ

ವಿದೇಶದ ಬ್ಯಾಂಕ್ ಗಳಲ್ಲಿ ಇಟ್ಟಿರುವ ಕಪ್ಪುಹಣ ವಾಪಸ್ ತರುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವರ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಸಿಕ್ಕಿದ್ದು, ಪರಿಣಾಮಕಾರಿ ಕಾನೂನು ಜಾರಿಗೆ ಕೇಂದ್ರದಿಂದ ಬುಧವಾರ ಅಂಗೀಕಾರ ದೊರಕಿದೆ...

ನವದೆಹಲಿ: ವಿದೇಶದ ಬ್ಯಾಂಕ್ ಗಳಲ್ಲಿ ಇಟ್ಟಿರುವ ಕಪ್ಪುಹಣ ವಾಪಸ್ ತರುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವರ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಸಿಕ್ಕಿದ್ದು, ಪರಿಣಾಮಕಾರಿ ಕಾನೂನು ಜಾರಿಗೆ ಕೇಂದ್ರದಿಂದ ಬುಧವಾರ ಅಂಗೀಕಾರ ದೊರಕಿದೆ.

2015 ಕೇಂದ್ರ ಬಜೆಟ್ ಅಧಿವೇಶನದ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಕಪ್ಪುಹಣ ಕುರಿತಂತೆ ಪರಿಣಾಮಕಾರಿಯಾದ ಕಾನೂನೊಂದನ್ನು ಜಾರಿ ತರುತ್ತೇನೆ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಕೇಂದ್ರದ ಅಂಗೀಕಾರಕ್ಕಾಗಿ ಕಾದಿದ್ದರು. ಜೇಟ್ಲಿ ಅವರ ಮನವಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಒಪ್ಪಿಗೆ ನೀಡಿದೆ.

ಮಸೂದೆ ಅನುಷ್ಠಾನಕ್ಕೆ ಬಂದರೆ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ವಿದೇಶದಲ್ಲಿರುವ ಅಕ್ರಮ ಆಸ್ತಿ ಹಾಗೂ ಸಂಪತ್ತುಗಳ ವಾರಸುದಾರರ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯಕವಾಗುತ್ತದೆ. ಮಸೂದೆ ಜಾರಿಯಾದರೆ ವಿದೇಶದಲ್ಲಿ ಅಕ್ರಮ ಆಸ್ತಿ ಹೊಂದಿದ ಭಾರತೀಯರಿಗೆ 10 ವರ್ಷಗಳ ಕಠಿಣ ಜೈಲುವಾಸ ಅನುಭವಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT