ಹಲ್ಲೆ ನಡೆಸಿದ ವೀಡಿಯೋ ತುಣುಕಿನ ಚಿತ್ರ 
ದೇಶ

ಬೈಕ್ ಸವಾರರ ಗುಂಪಿನಿಂದ ಯುವತಿಯರಿಗೆ ಹಿಗ್ಗಾಮುಗ್ಗಾ ಥಳಿತ

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರನ್ನು ಹಿಡಿದು, ಬೈಕ್ ನಲ್ಲಿ ಹೋಗುತ್ತಿದ್ದ 6 ಹುಡುಗರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಉತ್ತರಪ್ರದೇಶದ...

ಹಥ್ರಾಸ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯರನ್ನು ಹಿಡಿದು, ಬೈಕ್ ನಲ್ಲಿ ಹೋಗುತ್ತಿದ್ದ 6 ಹುಡುಗರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಹಥ್ರಾಸ್ ನಲ್ಲಿ ನಡೆದಿದೆ,

ತನ್ನ ಗೆಳತಿಯೊಂದಿಗೆ ಯುವತಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಳು. ಇದೇ ವೇಳೆ ಬೈಕ್ ನಲ್ಲಿ 6 ಹುಡುಗರ ಗುಂಪು ಯುವತಿಯರ ಬೈಕ್ ನ್ನು ಅಡ್ಡಗಟ್ಟಿದ್ದಾರೆ. ದಾರಿ ಬಿಡುವಂತೆ ಹೇಳಿದಾಗ ಕೇಳದ ಹುಡುಗರ ಗುಂಪು ಇದ್ದಕ್ಕಿದ್ದಂತೆ ಯುವತಿಯರೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿದ್ದಾರೆ. ನಂತರ ಇಬ್ಬರು ಯುವತಿಯರಿಗೂ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ದೃಶ್ಯವನ್ನು ಯುವಕರ ಗುಂಪಿನಲ್ಲಿದ್ದ ಓರ್ವ ಯುವಕ ವೀಡಿಯೋ ಮಾಡಿ, ಘಟನೆ ನಂತರ ವಾಟ್ಸ್ಅಪ್ ನಲ್ಲಿ ವೀಡಿಯೋ ಹಾಕಿದ್ದಾನೆ. ಅಂತರ್ಜಾಲದಲ್ಲಿ ಅಪ್ ಲೋಡ್ ಆದ ಈ 10 ನಿಮಿಷಗಳ ವಿಡಿಯೋ ದೇಶಾದಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿದ್ದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಬೈಕ್ ನಲ್ಲಿ ನಾನು ಮತ್ತು ನನ್ನ ಗೆಳತಿ ಇಬ್ಬರೂ ಮಾರುಕಟ್ಟೆಗೆ ಹೋಗುತ್ತಿದ್ದೆವು. ಈ ವೇಳೆ ಇದ್ದಕ್ಕಿದ್ದಂತೆ ಬೈಕ್ ನಲ್ಲಿ ಬಂದ 6 ಹುಡುಗರ ಗುಂಪು ನಮ್ಮನ್ನು ಅಡ್ಡಗಟ್ಟಿತು. ನಂತರ ಇದ್ದಕ್ಕಿದ್ದಂತೆ ಬೈಕ್ ನಿಂದ ಇಳಿದ ಹುಡುಗರು ಅಶ್ಲೀಲವಾಗಿ ನಡೆದು ಕೊಂಡರು. ನನಗೆ ಮತ್ತು ನನ್ನ ಗೆಳತಿಗೆ ಇಬ್ಬರಿಗೂ ಹೊಡೆಯಲಾರಂಭಿಸಿದರು. ಬಿಟ್ಟು ಬಿಡಿ ಎಂದು ಎಷ್ಟು ಹೇಳಿದರೂ ಕೇಳಲಿಲ್ಲ. ಮನೆಯವರು ಗಾಬರಿಯಾಗುತ್ತಾರೆ ಎಂಬ ಕಾರಣಕ್ಕೆ ಈ ವಿಷಯವನ್ನು ಮನೆಯಲ್ಲಿ ಹೇಳಿರಲಿಲ್ಲ. ಆದರೆ ವಾಟ್ಸ್ ಅಪ್ ನಲ್ಲಿ ಹಂಚಿಕೆಯಾದ ವೀಡಿಯೋ ನಮ್ಮ ಕುಟುಂಬಸ್ಥರಿಗೆ ಸಿಕ್ಕಾಗ ಅವರಿಗೆ ವಿಷಯ ತಿಳಿಯಿತು. ನಂತರ ಪೊಲೀಸರಿಗೆ ದೂರು ನೀಡಿದರು ಎಂದು ಹಲ್ಲೆಗೊಳಾಗಾದ ಯುವತಿಯೊಬ್ಬರು ಹೇಳಿದ್ದಾಳೆ.

ಹಲ್ಲೆ ನಡೆಸಿದ ಹುಡುಗರು ಹಾಗೂ ಯುವತಿಯರು ಒಂದೇ ಊರಿನವರಾಗಿದ್ದು, ಇಬ್ಬರು ಯುವತಿಯಲ್ಲೊಬ್ಬ ಯುವತಿಯನ್ನು ಗುಂಪಿನಲ್ಲಿದ್ದ ಓರ್ವ ಯುವಕ ಹಲವು ದಿನಗಳಿಂದ ಪ್ರೀತಿಸುತ್ತಿದ್ದ, ತನ್ನ ಪ್ರೀತಿಯ ನಿವೇದನೆಯನ್ನು ಯುವತಿಯ ಮುಂದಿಟ್ಟಾಗ ಯುವತಿ ಕುಟುಂಬಸ್ಥರು ಇದಕ್ಕೆಲ್ಲ ಒಪ್ಪುವುದಿಲ್ಲ ಎಂದು ಹೇಳಿ, ಹುಡುಗನ ಪ್ರೀತಿಯನ್ನು ತಿರಸ್ಕರಿಸಿದ್ದಳು ಎಂದು ತಿಳಿದು ಬಂದಿದೆ. ಪ್ರೀತಿ ಒಪ್ಪಿಕೊಂಡಿಲ್ಲ ಎಂಬ ಕಾರಣಕ್ಕೆ ಯುವತಿಯರು ಒಂಟಿಯಾಗಿ ಸಿಕ್ಕ ಸಂದರ್ಭದಲ್ಲಿ ಯುವಕ ತನ್ನ ಸ್ನೇಹಿತರೊಂದಿಗೆ ಹುಡಿಗಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನುಳಿದ ಇಬ್ಬರಿಗೆ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT