ಪ್ರಶಾಂತ್ ಭೂಷಣ್, 
ದೇಶ

ಪಕ್ಷದ ಎಲ್ಲಾ ಸ್ಥಾನಗಳಿಗೂ ಪ್ರಶಾಂತ್ ಭೂಷಣ್ ರಾಜಿನಾಮೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಬಂಡಾಯ ನಾಯಕ ಪ್ರಶಾಂತ್ ಭೂಷಣ್ ಅವರು ಬುಧವಾರ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.

ಭಿನ್ನಾಭಿಪ್ರಾಯ ಶಮನಕ್ಕಾಗಿ ನಿನ್ನೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ವಿರುದ್ಧವೇ ಬಂಡಾಯವೆದ್ದಿದ್ದ ಪ್ರಶಾಂತ್ ಭೂಷಣ್ ಹಾಗೂ ಯೇಗೇಂದ್ರ ಯಾದವ್ ಅವರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಪಕ್ಷದಲ್ಲಿ ತಾವು ಹೊಂದಿದ್ದ ಎಲ್ಲಾ ಹುದ್ದೆಗಳಿಗೂ ರಾಜಿನಾಮೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಆಪ್ ಹಿರಿಯ ನಾಯಕ ಸಂಜಯ್ ಸಿಂಗ್ ಅವರು, ಸಮಸ್ಯೆ ಪರಿಹಾರವಾಗುವವರೆಗೂ ಈ ಬಗ್ಗೆ ಪಕ್ಷ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದಿದ್ದಾರೆ. ಅಲ್ಲದೆ ಈ ಬಗ್ಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳುತ್ತಿರುವವರನ್ನೇ ಕೇಳಿ ಎಂದಿದ್ದಾರೆ.

ಸಂಜಯ್ ಸಿಂಗ್, ಕುಮಾರ್ ವಿಶ್ವಾಸ್, ಆಶುತೋಷ್ ಮತ್ತು ಆಶಿಶ್ ಖೆತನ್ ಅವರು ಕೇಜ್ರಿವಾಲ್ ಆಪ್ತರಾಗಿದ್ದು, ಸೋಮವಾರ ರಾತ್ರಿ ಇವರೆಲ್ಲರೂ ಯೇಗೇಂದ್ರ ಯಾದವ್ ಅವನ್ನು ಭೇಟಿ ಮಾಡಿ, ಪಕ್ಷದಲ್ಲಿನ ಆಂತರಿಕ ಕಲಹದ ಕುರಿತು ಚರ್ಚಿಸಿದ್ದರು. ಆದರೆ ಈ ನಿಯೋಗವನ್ನು ಭೇಟಿ ಮಾಡಲು ನಿರಾಕರಿಸಿರುವ ಪ್ರಶಾಂತ್ ಭೂಷಣ್, ತಮ್ಮಲ್ಲಿನ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಕೇಜ್ರಿವಾಲ್ ಅವರನ್ನೇ ಭೇಟಿ ಮಾಡುತ್ತೇನೆ, ಅವರ ಪ್ರತಿನಿಧಿಗಳನ್ನಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT