ಪ್ರತಿಭಟನಾನಿರತ ಕ್ರೈಸ್ತ ಸನ್ಯಾಸಿನಿಯರ ಸಂಗ್ರಹ ಚಿತ್ರ 
ದೇಶ

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ನೊಂದ ಸನ್ಯಾಸಿನಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

71 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸನ್ಯಾಸಿನಿ...

ರಾಣಾಘಾಟ್: 71 ವರ್ಷದ ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸನ್ಯಾಸಿನಿ ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಲು ತಯಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸನ್ಯಾಸಿನಿ ಈಗಾಗಲೇ ಗುಣಮುಖರಾಗಿದ್ದು, ಆಹಾರ, ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಹಾಗಾಗಿ ಅವರನ್ನು ಬಿಡುಗಡೆಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಆದರೆ ಈವರೆಗೂ ಕಾನ್ವೆಂಟ್ ನ ಅಧಿಕಾರಿಗಳೊಂದಿಗೆ ಸಂವಹನ ಸಾಧ್ಯವಾಗಿಲ್ಲ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸನ್ಯಾಸಿನಿ ಮೇಲಾದ ಅತ್ಯಾಚಾರ ವಿರೋಧಿಸಿ ಪಶ್ಚಿಮ ಬಂಗಾಳದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಘಟನೆ ಮರುಕಳಿಸಿದಂತೆ , ಪ್ರಕರಣವನ್ನು ಸಿಬಿಐ ವಿಚಾರಣೆಗೆ ಒಪ್ಪಿಸಿ ಕ್ರಮ ಕೈಗೊಂಡಿದ್ದರು.

ನಾಡಿಯಾ ಜಿಲ್ಲೆಯ ಗಂಗ್ನಾಪುರದಲ್ಲಿರುವ ಕಾನ್ವೆಂಟ್ ಗೆ ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಒಳ ನುಗ್ಗಿದ ರೌಡಿಗಳು ಹಣ ದೋಚಲು ಮುಂದಾಗಿದ್ದಾರೆ. ಈ ವೇಳೆ ರೌಡಿಗಳನ್ನು ಕಂಡ ಸನ್ಯಾಸಿನಿ ಹಣದೋಚಲು ಬಿಡದೆ ತಡೆವೊಡ್ಡಿದ್ದಾರೆ. ಸನ್ಯಾಸಿನಿಯ ವರ್ತನೆಯಿಂದ ತೀವ್ರ ಕೆಂಡಾಮಂಡಲವಾದ ರೌಡಿಗಳು ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ನಂತರ ಸ್ಥಳದಲ್ಲಿ ಅಲ್ಮೆರಾದಲ್ಲಿದ್ದ 12 ಲಕ್ಷವನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದರು.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪ್ರಕರಣದಲ್ಲಿ 4 ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.ಆದರೆ ಘಟನೆ ನಡೆದು 5 ದಿನಗಳು ಕಳೆದಿದ್ದರು ಈವರೆಗೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲದಿರುವುದು ಪಶ್ಚಿಮ ಬಂಗಾಳದಾದ್ಯಂತ ತೀವ್ರ ಅಸಮಾಧಾನ್ನುಂಟು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT