ರತನ್ ಟಾಟಾ 
ದೇಶ

ಕಾಯಕಲ್ಪ ಮಂಡಳಿಗೆ ರತನ್ ಟಾಟಾ ಮುಖ್ಯಸ್ಥ

ಭಾರತೀಯ ರೈಲ್ವೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಕಾಯಕಲ್ಪ ಮಂಡಳಿ ರಚಿಸಿದೆ ಕೇಂದ್ರ ಸರ್ಕಾರ. ರೈಲ್ವೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ...

ನವದೆಹಲಿ: ಭಾರತೀಯ ರೈಲ್ವೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಕಾಯಕಲ್ಪ ಮಂಡಳಿ ರಚಿಸಿದೆ ಕೇಂದ್ರ ಸರ್ಕಾರ. ರೈಲ್ವೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ಅದನ್ನು ರಚಿಸಲಾಗಿದೆ ಎಂದು ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ಹೊಸ ಮಂಡಳಿಗೆ ಮುಖ್ಯಸ್ಥರನ್ನಾಗಿ ಟಾಟಾ ಸಮೂಹ ಸಂಸ್ಥೆಯ ಮಾಜಿ ಅಧ್ಯಕ್ಷ ರತನ್ ಟಾಟಾರನ್ನು ನೇಮಿಸಲಾಗಿದೆ.

ಅವರ ಜತೆಗೆ ರೈಲ್ವೆ ಇಲಾಖೆ ಯೂನಿಯನ್ ಗಳ ಶಿವ್ ಗೋಪಾಲ್ ಮತ್ತು ಎಂ.ರಾಘವಯ್ಯ ಅವರು ಸದಸ್ಯರಾಗಲಿದ್ದಾರೆ. ಶಿಘ್ರದಲ್ಲಿ ಹೊಸ ಮಂಡಳಿಗೆ ಮತ್ತಷ್ಟು ಸದಸ್ಯರನ್ನು ನೇಮಿಸಲಾಗುತ್ತದೆ ಎಂದಿದ್ದಾರೆ ಸುರೇಶ್ ಪ್ರಭು.

ಈಗಾಗಲೇ ಹಲವು ಸಮಸ್ಯೆಗಳ ಸುಳಿಯಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರುವಲ್ಲಿ ಈ ಸಮಿತಿ ಸಲಹೆ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT