ಅರವಿಂದ್ ಕೇಜ್ರಿವಾಲ್, 
ದೇಶ

ಮುಂದಿನ ವಾರ ಎಎಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ, ಕೇಜ್ರಿವಾಲ್ ಗೈರು ಸಾಧ್ಯತೆ

ನವದೆಹಲಿ: ಆಂತರಿಕ ಭಿನ್ನಾಭಿಪ್ರಾಯದಿಂದ ಬಳಲುತ್ತಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮುಂದಿನ ವಾರ ನಡೆಯಲಿದ್ದು, ಈ ಸಭೆಗೆ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗೈರು ಆಗುವ ಸಾಧ್ಯತೆ ಇದೆ.

ಇದೇ ಮಾರ್ಚ್ 28ರಂದು ಪಕ್ಷದ ರಾಷ್ಟ್ರೀಯ ಸಮಿತಿ ಸಭೆ ನಿಗದಿಯಾಗಿದ್ದು, ಈ ಸಭೆಯ ಅಜೆಂಡ ಅಂತಿಮಗೊಳಿಸಲು ಕಾರ್ಯಕಾರಣಿ ಸಭೆ ಕರೆಯಲಾಗಿದೆ.

ಅರವಿಂದ್ ಕೇಜ್ರಿವಾಲ್, ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದ್ ಸೇರಿದಂತೆ ಪ್ರಮುಖ 21 ನಾಯಕರನ್ನೊಳಗೊಂಡ ಕಾರ್ಯಕಾರಣಿ ಸಭೆ ಈ ವಾರದ ಮಧ್ಯದಲ್ಲಿ ನಡೆಯುವ ಸಾಧ್ಯತೆ ಇದೆ. ಆದರೆ ಈ ಸಭೆಗೆ ಕೇಜ್ರಿವಾಲ್ ಅವರು ಹಾಜರಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ, ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಶಮನ ಮಾಡಲು ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ರಾಜಿ ಪ್ರಯತ್ನಗಳು ಯಶಸ್ವಿಯಾದರೆ ಮಾತ್ರ ಕಾರ್ಯಕಾರಣಿ ಸಭೆ ಸುಗಮವಾಗಿ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT