ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ 
ದೇಶ

ಭೂ ಮಸೂದೆ ಸುಗ್ರೀವಾಜ್ಞೆ: ಅಣ್ಣಾ ಹಜಾರೆ ಪ್ರತಿಭಟನೆಗೆ ಕೈಜೋಡಿಸಿದ ಡಿಎಂಕೆ

ವಿವಾದಾತ್ಮಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತ ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಡಿಎಂಕೆ ಪಕ್ಷ, ಅಣ್ಣಾ ಅವರ ಹೋರಾಟದಲ್ಲಿ ತಾನೂ ಕೂಡ ಭಾಗಿಯಾಗುವುದಾಗಿ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...

ಚೆನ್ನೈ: ವಿವಾದಾತ್ಮಕ ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತ ಅಣ್ಣಾ ಹಜಾರೆ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಡಿಎಂಕೆ ಪಕ್ಷ, ಅಣ್ಣಾ ಅವರ ಹೋರಾಟದಲ್ಲಿ ತಾನೂ ಕೂಡ ಭಾಗಿಯಾಗುವುದಾಗಿ ಹೇಳಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಭೂ ಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ತಮಿಳುನಾಡಿನಾದ್ಯಂತ ರ್ಯಾಲಿ ಕೈಗೊಂಡಿದ್ದ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು, ಭೂ ಮಸೂದೆ ಕಾಯ್ದೆ ತಿದ್ದುಪಡಿ ಕುರಿತಂತೆ ಅಣ್ಣಾ ಹಜಾರೆ ಬರೆದಿರುವ ಪತ್ರದಲ್ಲಿ ಹಲವಾರು ಸತ್ಯಾಂಶಗಳಿದ್ದು, ರೈತರಿಗೆ ನ್ಯಾಯ ಒದಗಿಸುವ ಸಲುವಾಗಿ ಕಾಯ್ದೆ ವಿರೋಧಿಸಿ ತಾವೂ ಹಾಗೂ ತಮ್ಮ ಪಕ್ಷವೂ ಪ್ರತಿಭಟನೆಯಲ್ಲಿ ಕೈಜೋಡಿಸುತ್ತದೆ ಎಂದು ಹೇಳುವ ಮೂಲಕ ಅಣ್ಣಾ ಹಜಾರೆ ಅವರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಪತ್ರದಲ್ಲಿ ಅಣ್ಣಾ ಹಜಾರೆ ಅವರು 6 ಪ್ರಮುಖ ಅಂಶಗಳನ್ನು ಹೇಳಿದ್ದಾರೆ. ತಿದ್ದುಪಡಿಯಾಗಿರುವ ಕಾಯ್ದೆಯಲ್ಲಿ ಇದು ಬಹಳ ಮುಖ್ಯವಾದ ಅಂಶ. ಈ ಕುರಿತಂತೆ ಎಲ್ಲಾ ಪಕ್ಷಗಳು ಒಂದಾಗಿ ಹೋರಾಟ ನಡೆಸಬೇಕು. ಕಾಯ್ದೆ ವಿರೋಧಿಸಿ ಮುಂದಿನಗಳಲ್ಲಿ ನಮ್ಮ ಪಕ್ಷವೂ ದೇಶದಾದ್ಯಂತ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT