ಚರ್ಚ್ ಮೇಲೆ ದಾಳಿ, ದಾಳಿಕೋರರನ್ನು ಹುಡುಕದಿದ್ದರೆ ಶಾಲೆಗಳನ್ನು ತೆರೆಯಬೇಡಿ ಕ್ರೈಸ್ತರಿಂದ ಬೆದರಿಕೆ 
ದೇಶ

ಚರ್ಚ್ ದಾಳಿ: ದಾಳಿಕೋರರನ್ನು ಬಂಧಿಸದಿದ್ದರೆ ಶಾಲೆಗಳನ್ನು ತೆರೆಯಬೇಡಿ ಕ್ರೈಸ್ತರಿಂದ ಬೆದರಿಕೆ

ಮಧ್ಯಪ್ರದೇಶ ಜಬಲ್ ಪುರ ಚರ್ಚ್ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ತೀವ್ರವಾಗಿ ವಿರೋಧಿಸಿರುವ ಸ್ಥಳೀಯ ಕ್ರಿಶ್ಚಿಯನ್ನರು ಪ್ರಕರಣ...

ಭೂಪಾಲ್: ಮಧ್ಯಪ್ರದೇಶ ಜಬಲ್ ಪುರ ಚರ್ಚ್ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ತೀವ್ರವಾಗಿ ವಿರೋಧಿಸಿರುವ ಸ್ಥಳೀಯ ಕ್ರಿಶ್ಚಿಯನ್ನರು ಪ್ರಕರಣ ಸಂಬಂಧ ದಾಳಿಕೋರರನ್ನು ಬಂಧಿಸಿ, ಕ್ರಮ ಕೈಗೊಳ್ಳದಿದ್ದರೆ ಸ್ಥಳೀಯ ಶಾಲಾ ಕಾಲೇಜುಗಳನ್ನು ತೆರೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆ ಚರ್ಚ್ ನಲ್ಲಿ ಸುಮಾರು 200 ಹೆಚ್ಚು ಕ್ರೈಸ್ತರು ಹಾಜರಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸ್ಥಳಕ್ಕಾಗಮಿಸಿದ ಅನಾಮಿಕ ವ್ಯಕ್ತಿಗಳು ಚರ್ಚ್ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಘಟನೆಗೆ ಜಿಲ್ಲಾಯಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿತ್ತಲ್ಲದೇ, ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಅಲ್ಲಿನ ಸ್ಥಳೀಯರು ಪಟ್ಟು ಹಿಡಿದಿದ್ದರು.

ಚರ್ಚ್ ನಲ್ಲಿ ಧಾರ್ಮಿಕ ಮತಾಂತರ ಕಾರ್ಯಕ್ರಮ ನಡೆಯುತ್ತಿದ್ದರಿಂದ ಇದನ್ನು ವಿರೋಧಿಸಿ ಕಲ್ಲು ತೂರಾಟ ನಡೆದಿರಬಹುದು, ಮತಾಂತರ ನಡೆಯದಿದ್ದರೆ ಆ ಸ್ಥಳದಲ್ಲಿ ಅಷ್ಟು ಮಂದಿ ಸೇರಲು ಸಾಧ್ಯವಿರಲಿಲ್ಲ ಎಂದು ಹಿಂದೂ ಧರ್ಮ ಸೇನೆಯ ಸದಸ್ಯ ಯೋಗೇಶ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಸ್ಥಳೀಯ ಪೊಲೀಸರು ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಘಟನೆ ನಡೆದು ಹಲವು ದಿನಗಳು ಕಳೆದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದಿರುವುದರ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕ್ರೈಸ್ತರು ದಾಳಿಕೋರರನ್ನು ಬಂಧಿಸಿ, ಕ್ರಮ ಕೈಗೊಳ್ಳುವವರೆಗೂ ಸ್ಥಳೀಯ ಶಾಲಾ ಮತ್ತು ಕಾಲೇಜುಗಳನ್ನು ಮುಚ್ಚುವಂತೆ ಆಗ್ರಹಿಸಿದ್ದಾರೆ.

ಕೆಲವು ಹಿಂದೂ ಧರ್ಮದ ಜನರು ಮತಾಂತರಗೊಳ್ಳಬೇಕೆಂದು ಚರ್ಚ್ ಗೆ ಬಂದಿದ್ದರು. ಹಾಗಾಗಿಯೇ ಅವರನ್ನು ಧರ್ಮ ಪರಿವರ್ತನೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸತೀಶ್ ಎಂಬುವವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT