ಸುಬ್ರಮಣಿಯನ್ ಸ್ವಾಮಿ 
ದೇಶ

ಜಾಟ್ ಸಮುದಾಯ ವಿವಾದ: ಸುಗ್ರೀವಾಜ್ಞೆ ಹೊರಡಿಸಿ ಎಂದ ಸುಬ್ರಮಣಿಯನ್

ಜಾಟ್‌ ಸಮುದಾಯದವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಬೇಕೆಂದರೆ ಸುಗ್ರೀವಾಜ್ಞೆ ಹೊರಡಿಸಿದೆ...

ನವದೆಹಲಿ: ಜಾಟ್‌ ಸಮುದಾಯದವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸಬೇಕೆಂದರೆ ಸುಗ್ರೀವಾಜ್ಞೆ ಹೊರಡಿಸಿದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರ ಯಾವುದೇ ಸಮೀಕ್ಷೆ ಮತ್ತು ದಾಖಲೆಗಳನ್ನು ಪರಿಶೀಲಿಸದೇ ಜಾಟ್ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಿತ್ತು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಅದನ್ನು ಅನೂರ್ಜಿತಗೊಳಿಸಿದೆ. ಕೇಂದ್ರ ಸರ್ಕಾರ ಈ ಕುರಿತು ಪರಿಶೀಲನೆ ನಡೆಸಿ, ಸುಪ್ರೀಂ ಕೋರ್ಟ್ ನಿರ್ದೇಶನದಲ್ಲಿ ಸುಗ್ರಿವಾಜ್ಞೆ ಹೊರಡಿಸಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಭಾರತದಲ್ಲಿ ವ್ಯಾಪಕ  ಪ್ರಭಾವ ಹೊಂದಿದ ಜಾಟ್‌ ಸಮುದಾಯಕ್ಕೆ ಮೀಸಲಾತಿ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ, ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅದನ್ನು ಒಬಿಸಿ ಪಟ್ಟಿಗೆ ಸೇರಿಸಿತ್ತು. ಯುಪಿಎ ಸರ್ಕಾರದ ಈ ನಿರ್ಧಾರವನ್ನೇ ಅಧಿಕಾರಕ್ಕೆ ಬಂದ ಮೋದಿ ಸರ್ಕಾರವೂ ಜಾಟ್ ಸಮುದಾಯವನ್ನು ಹಿಂದುಳಿದ ಪ್ರವರ್ಗಗಳಲ್ಲಿಯೇ ಮುಂದುವರೆಯುವಂತೆ ಮಾಡಿತ್ತು.

ಜಾಟ್ ಸಮುದಾಯದ ಬೆಳವಣಿಗಳ ಮೇಲೆ ಸುಪ್ರೀಂ ಕಣ್ಗಾವಲಿರಿಸಿದೆ. ಅವರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ದೇಶದಲ್ಲಿ ಪ್ರಬಲವಾಗಿದೆ. ಜಾಟ್ ಸಮುದಾಯವನ್ನು ಹಿಂದುಳಿದ ಪ್ರವರ್ಗಗಳಿಗೆ ಸೇರಿಸಿದರೆ ಇನ್ನಿತರೆ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ಹಾಗಾಗಿ ಜಾಟ್ ಸಮುದಾಯವನ್ನು ಹಿಂದುಳಿತ ಪ್ರವರ್ಗಗಳಿಂದ ಕೈಬಿಡಬೇಕೆಂದು ಕೇಂದ್ರಕ್ಕೆ ಸುಪ್ರೀಂ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT