ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು ಹಿರಿಯ ವಕೀಲರಾದ ಭವಾನಿಸಿಂಗ್ 
ದೇಶ

ಜಯಾ ಅಕ್ರಮ ಆಸ್ತಿ: ಹೈಕೋರ್ಟಲ್ಲೂ ಭವಾನಿ ಸಿಂಗ್ ಎಸ್ಪಿಪಿಯಾಗಿರಬೇಕೇ?

ವಿಶೇಷ ಕೋರ್ಟಲ್ಲಿ ಜಯಲಿಲತಾ ಪ್ರಕರಣದಲ್ಲಿ ವಾದ ಮಾಡಿದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‍ಪಿಪಿ) ಭವಾನಿ ಸಿಂಗ್‍ಗೆ ಹೈಕೋರ್ಟಲ್ಲಿ ವಾದ ಮಂಡನೆಗೆ...

ನವದೆಹಲಿ: `ವಿಶೇಷ ಕೋರ್ಟಲ್ಲಿ ಜಯಲಿಲತಾ ಪ್ರಕರಣದಲ್ಲಿ ವಾದ ಮಾಡಿದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‍ಪಿಪಿ) ಭವಾನಿ ಸಿಂಗ್‍ಗೆ ಹೈಕೋರ್ಟಲ್ಲಿ ವಾದ ಮಂಡನೆಗೆ ಅವಕಾಶವೇಕೆ? ಅಲ್ಲಿ ಪ್ರಕರಣ ಮುಕ್ತಾಯವಾದಾಗ ಅವರ ಕರ್ತವ್ಯ ಮುಗಿದಿತ್ತು.'- ಹೀಗೆಂದು ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡದ್ದು ಸುಪ್ರೀಂಕೋರ್ಟ್.

ಅಣ್ಣಾಡಿಎಂಕೆ ನಾಯಕಿ ಜಯಲಲಿತಾರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್‍ರನ್ನು ವಜಾಮಾಡಬೇಕೆಂದು ಡಿಎಂಕೆ ನಾಯಕ ಕೆ.ಅನ್ಬಳಗನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಸರ್ಕಾರವನ್ನು ಕೋರ್ಟ್ ತರಾಟೆಗೆಗೆ ತೆಗೆದುಕೊಂಡಿದೆ. ಇದೇ ಸಂದರ್ಭದಲ್ಲಿ ಹೈಕೋರ್ಟಲ್ಲಿ ನಡೆಯುತ್ತಿರುವ ಅಣ್ಣಾಡಿಎಂಕೆ ನಾಯಕಿಯ ವಿರುದ್ಧ ಪ್ರಕರಣಕ್ಕೆ ತಡೆಯಾಜ್ಞೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ನೀವೇಕೆ ಅವರನ್ನು ಹೈಕೋರ್ಟಲ್ಲಿ ವಾದ ಮಂಡಿಸದಂತೆ ತಡೆಯಲಿಲ್ಲ. ಅದಕ್ಕೆ ಅವಕಾಶವಿಲ್ಲದಿದ್ದರೂ ನೀವೇನೂ ಕ್ರಮ ಕೈಗೊಂಡಿಲ್ಲ ಎಂದು ನ್ಯಾ.ಮದನ್ ಬಿ.ಲೋಕುರ್ ಮತ್ತು ನ್ಯಾ.ಆರ್. ಭಾನುಮತಿ ಅವರನ್ನೊಳಗೊಂಡ ಪೀಠ ಪ್ರಶ್ನಿಸಿದೆ. ಭವಾನಿ ಸಿಂಗ್ ಬದಲಾಗಿ ಮತ್ತೊಬ್ಬ ಎಸ್ ಪಿಪಿಯನ್ನು ನೇಮಕ ಮಾಡದೇ ಇದ್ದದ್ದು ಮತ್ತು ಈ ಬಗ್ಗೆ ಯಾವುದೇ ಉತ್ತರ ಸಲ್ಲಿಸದೇ ಇದ್ದ ಕರ್ನಾಟಕ ಸರ್ಕಾರದ ಧೋರಣೆಯನ್ನೂ ಸುಪ್ರೀಂಕೋರ್ಟ್ ಟೀಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ಪತ್ರಿಕಾಗೋಷ್ಠಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

SCROLL FOR NEXT