ಶೈಲೇಶ್ ಯಾದವ್ ಅವರ ಮನೆ (ಸಂಗ್ರಹ ಚಿತ್ರ) 
ದೇಶ

ಶೈಲೇಶ್ ಯಾದವ್‍ರದ್ದು ಕೊಲೆ?

ಮಧ್ಯಪ್ರದೇಶ ಅರಣ್ಯ ಸಿಬ್ಬಂದಿ ನೇಮಕಾತಿ ಪರೀಕ್ಷಾ ಮಂಡಳಿ(ವ್ಯಾಪಮ್) ಹಗರಣ ಪ್ರಮುಖ ಆರೋಪಿ ಗವರ್ನರ್ ರಾಮ್ ನರೇಶ್ ಯಾದವ್...

ಭೋಪಾಲ್: ಮಧ್ಯಪ್ರದೇಶ ಅರಣ್ಯ ಸಿಬ್ಬಂದಿ ನೇಮಕಾತಿ ಪರೀಕ್ಷಾ ಮಂಡಳಿ(ವ್ಯಾಪಮ್) ಹಗರಣ ಪ್ರಮುಖ ಆರೋಪಿ ಗವರ್ನರ್ ರಾಮ್ ನರೇಶ್ ಯಾದವ್ ಅವರ ಪುತ್ರನ ಸಾವು ಹೊಸ ತಿರುವು ಪಡೆದುಕೊಳ್ಳುತ್ತಿದೆ.

ಅವರ ಕುಟುಂಬ ಸದಸ್ಯರು ಇದು ಸಹಜ ಸಾವು ಎಂದು ಹೇಳಿಕೆ ನೀಡಿದ್ದರೂ, ಶೈಲೇಶ್ ಅವರಿಗೆ ವಿಷ ಪ್ರಾಶನ ಮಾಡಲಾಗಿದೆ ಎಂಬ ಅನುಮಾನಗಳು ಬಲವಾಗಿದೆ. ಇದು ಸಹಜ ಸಾವಾಗಿದ್ದರಿಂದ ನಾವು ಈ ಪ್ರಕರಣದ ತನಿಖೆ ನಡೆಸಲು ಒತ್ತಾಯಿಸಲ್ಲ ಎಂದು ಮೃತ ಶೈಲೇಶ್ ಅಣ್ಣ ಕಮಲೇಶ್ ಯಾದವ್ ಹೇಳಿರುವುದು ಅನುಮಾನಗಳಿಗೆ ಎಡೆಮಾಡಿದೆ. ಮೇಲ್ನೋಟಕ್ಕೆ ಹಾರ್ಟ್ ಅಟ್ಯಾಕ್ ಎಂದಿರುವ ಪೊಲೀಸರು ಅಂತಿಮ ವರದಿಯನ್ನು ನಿರೀಕ್ಷಿಸುತ್ತಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಭೋಪಾಲ್‍ನ ಆಸ್ಪತ್ರೆಗೆ ದಾಖಲಾಗಿದ್ದ ಗವರ್ನರ್ ರಾಮ್ ನರೇಶ್ ಯಾದವ್ ಅವರನ್ನು ಏರ್ ಆ್ಯಂಬುಲೆನ್ಸ್‍ನಲ್ಲಿ ಲಖನೌ ಕರೆತರಲಾಗಿದೆ.

ವ್ಯಾಪಮ್ ಹಗರಣದ ಆರೋಪ ಎದುರಿಸುತ್ತಿರುವ ಶೈಲೇಶ್ ಯಾದವ್ ಬುಧವಾರ ತಮ್ಮ ತಂದೆಯ ಅಧಿಕೃತ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. 3ನೇ ದರ್ಜೆ ಶಿಕ್ಷಕರ ನೇಮಕಾತಿ ವೇಳೆ ದುಡ್ಡು ತೆಗೆದುಕೊಂಡು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಆರೋಪವೂ ಶೈಲೇಶ್ ಮೇಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT