ಢಾಕಾದಲ್ಲಿ ಕಾಲ್ತುಳಿತ 
ದೇಶ

ಢಾಕಾದಲ್ಲಿ ಕಾಲ್ತುಳಿತ: 10 ಯಾತ್ರಾರ್ಥಿಗಳ ಸಾವು

ಇಲ್ಲಿನ ಪುರಾತನ ಬ್ರಹ್ಮಪುತ್ರಾ ನದಿಯ ತಟದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅಷ್ಟಮಿ ಸ್ನಾನದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ...

ಢಾಕಾ: ಇಲ್ಲಿನ ಪುರಾತನ ಬ್ರಹ್ಮಪುತ್ರಾ ನದಿಯ ತಟದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅಷ್ಟಮಿ ಸ್ನಾನದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 10 ಹಿಂದೂ ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ. ಸಾವಿಗೀಡಾದವರಲ್ಲಿ 7 ಮಂದಿ ಮಹಿಳೆಯರಾಗಿದ್ದಾರೆ. 50 ಮಂದಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರಾಯಣಗಂಜ್‌ನಲ್ಲಿ ಬೆಳಗ್ಗೆ 5.48ರ ವೇಳೆ ಅಷ್ಟಮಿ ಸ್ನಾನ ಮಾಡಲು ಸಾವಿರಾರು ಭಕ್ತರು ಜಮಾಯಿಸಿದ್ದರು. ಪುಣ್ಯ ಸ್ನಾನ ಮಾಡಲು ಭಕ್ತರಿಗೆ ಸಹಾಯವಾಗಲೆಂದು  16 ಕಟ್ಟೆಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ಕಟ್ಟೆಗಳತ್ತ ಹೋಗಲು ಜನರು ನೂಕು ನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಬೆಳಗ್ಗೆ 9.15 ರಿಂದ 10 ಗಂಟೆಯ ವೇಳೆಗೆ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 50 ರಿಂದ ಮೇಲ್ಪಟ್ಟವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT