ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 
ದೇಶ

ವಾಜಪೇಯಿ ಅಂತಾರಾಷ್ಟ್ರೀಯ ಹೆಗ್ಗುರುತು: ರಾಜನಾಥ್ ಸಿಂಗ್

ನಮ್ಮ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತಕ್ಕಷ್ಟೇ ಸೀಮಿತವಾದ ವ್ಯಕ್ತಿಯಲ್ಲ. ಅವರು ಅಂತರರಾಷ್ಟ್ರೀಯ ವ್ಯಕ್ತಿಯೂ ಕೂಡ ಹೌದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ...

ನವದೆಹಲಿ: ನಮ್ಮ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಭಾರತಕ್ಕಷ್ಟೇ ಸೀಮಿತವಾದ ವ್ಯಕ್ತಿಯಲ್ಲ ಅವರು ಅಂತರರಾಷ್ಟ್ರೀಯ ವ್ಯಕ್ತಿಯೂ ಕೂಡ ಹೌದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟರ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿರುವ ಹಿನ್ನೆಲೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜನಾಥ್ ಸಿಂಗ್ ಅವರು, ವಾಜಪೇಯಿ ಅವರು ಇಂದಿಗೂ ಎಲ್ಲರಿಗೂ ಪ್ರೀತಿಪಾತ್ರರಾದ ವ್ಯಕ್ತಿ, ಅವರ ಮೇಲಿರುವ ಗೌರವ ಎಂದಿಗೂ ಕಡಿಮೆಯಾಗುವಂತಹದ್ದಲ್ಲ. ವಾಜಪೇಯಿ ಅವರು ಭಾರತ ವ್ಯಕ್ತಿಯಷ್ಟೇ ಅಲ್ಲ, ಅವರು ಅಂತರಾಷ್ಟ್ರೀಯ ವ್ಯಕ್ತಿ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದು, ವಾಜಪೇಯಿ ಅವರ ನಿವಾಸದಲ್ಲೇ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ನೇತಾರ ಸಂದೀಪ್ ದೀಕ್ಷಿತ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?