ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರ ಮಾಜಿ ಸಚಿವ ಪಿ.ಆರ್. ಕಿಂಡಯ್ಯ ನಿಧನ 
ದೇಶ

ಹಿರಿಯ ಕಾಂಗ್ರೆಸ್ ನಾಯಕ ಪಿ.ಆರ್. ಕಿಂಡಯ್ಯ ನಿಧನ

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ.ಆರ್. ಕಿಂಡಯ್ಯ (87) ಶುಕ್ರವಾರ ನಿಧನರಾಗಿದ್ದಾರೆ...

ಶಿಲ್ಲಾಂಗ್: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರ ಮಾಜಿ ಸಚಿವ ಪಿ.ಆರ್. ಕಿಂಡಯ್ಯ (87) ಶುಕ್ರವಾರ ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಿಂಡಯ್ಯ ಅವರ ಸ್ಥಿತಿ ನಿನ್ನೆ ರಾತ್ರಿ ಚಿಂತಾಜನಕವಾದಾಗ ಸ್ಥಳೀಯ ಬೆಥಾನಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೇ.7 1928 ರಂದು ಜನಿಸಿದ ಕಿಂಡಯ್ಯ ಅವರು, ತಮ್ಮ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮೂವರು ಗಂಡ ಮಕ್ಕಳನ್ನು ಅಗಲಿದ್ದಾರೆ. 1995-1988ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್, ಬುಡಕಟ್ಟು ವ್ಯವಹಾರಗಳ ಸಚಿವ, 1993ರಲ್ಲಿ ಮಿಜೋರಾಂನ ಗವರ್ನರ್ ಆಗಿದ್ದರು. ಅಲ್ಲದೆ, 1998 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದ್ದ ಕಿಂಡಯ್ಯ ಅವರು 2009ರಲ್ಲಿ ರಾಜಕೀಯ ವಲಯಕ್ಕೆ ವಿದಾಯ ಹೇಳಿದ್ದರು.

ಕಿಂಡಯ್ಯ ಅವರು ಕೇವಲ ರಾಜಕೀಯ ವಲಯಕ್ಕಷ್ಟೇ ಸೀಮಿತವಾಗಿರದೆ ಹಲವು ಪುಸ್ತಕಗಳನ್ನು ಬರೆದಿದ್ದರು. ಅವುಗಳಲ್ಲಿ ಜವಾಹರ್ ಲಾಲ್ ನೆಹರು, ದಿ ತಿಂಕಿಂಗ್ ಡೈನಾಮೋ, ಮೇಘಾಲಯ ಅಂದು ಮತ್ತು ಇಂದು, ಮಿಜೋ ಸ್ವಾತಂತ್ರ್ಯ ಹೋರಾಟಗಾರರು, ಪಿಲ್ಲರ್ಸ್ ಆಪ್ ಮಿಜೋ ಸೊಸೈಟಿ ಬಿಸೈಡ್ಸ್ ಅದರ್ಸ್ ಎಂಬ ಪುಸ್ತಕಗಳು ಪ್ರಮುಖವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT