ರಾಜ್ಯಸಭೆ 
ದೇಶ

ಭೂಸ್ವಾಧೀನ ವಿಧೇಯಕ ಪ್ರಾದೇಶಿಕ ಪಕ್ಷಗಳತ್ತ ಕಣ್ಣು

ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಕೇಂದ್ರ ಸರ್ಕಾರ ಈಗ ಸಣ್ಣಪುಟ್ಟ ಪಕ್ಷಗಳನ್ನು ತನ್ನತ್ತ ...

ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಕೇಂದ್ರ ಸರ್ಕಾರ ಈಗ ಸಣ್ಣಪುಟ್ಟ ಪಕ್ಷಗಳನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿದೆ. ರಾಜ್ಯಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಪಡೆಯುವುದು ಸುಲಭವಲ್ಲ ಎಂದು ಗೊತ್ತಾದ ಹಿನ್ನೆಲೆಯಲ್ಲಿ ಸರ್ಕಾರ ಈ ಹೆಜ್ಜೆಯಿಟ್ಟಿದೆ. ಸಮಾಜವಾದಿ ಪಕ್ಷ, ಶಿವಸೇನೆ, ಬಿಜೆಡಿ ಮತ್ತಿತರ ಪ್ರಾದೇಶಿಕ  ಪಕ್ಷಗಳ ಬೆಂಬಲ ಪಡೆದು ವಿಧೇಯಕಕ್ಕೆ ಹಸಿರು ನಿಶಾನೆ ಪಡೆಯುವುದು ಸರ್ಕಾರದ ಉದ್ದೇಶ.ಕಾಂಗ್ರೆಸ್ ಮತ್ತು ಎಡಪಕ್ಷಗಳು ಯಾವ ಕಾರಣಕ್ಕೂ ವಿಧೇಯಕಕ್ಕೆ ಬೆಂಬಲ ನೀಡು ವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ.

ರಾಜ್ಯಸಭೆಯಲ್ಲಿ ಈ ಪಕ್ಷಗಳ ಒಟ್ಟು ಬಲಾಬಲ 79. 244 ಸದಸ್ಯ ಬಲದ ರಾಜ್ಯಸಭೆಯಲ್ಲಿ ಇತರೆ ಪ್ರಾದೇಶಿಕ ಪಕ್ಷಗಳ 54 ಮಂದಿ ಸದಸ್ಯರಿದ್ದಾರೆ. ಇವರೆಲ್ಲ ಬೆಂಬಲ ನೀಡಿದರೆ ಎನ್‍ಡಿಎ ಹಾದಿ ಸುಗಮ ವಾಗುತ್ತದೆ.ಹಾಗಾಗಿ ರೈತರಿಗೆ ಭೂಸ್ವಾಧೀನ ವನ್ನು ತಿರಸ್ಕರಿಸುವ ಸ್ವಲ್ಪಮಟ್ಟಿನ ಹಕ್ಕು ಸೇರಿದಂತೆ ವಿಧೇಯಕದಲ್ಲಿ ಇನ್ನಷ್ಟು ಬದಲಾವಣೆ ತಂದು ಈ ಪಕ್ಷಗಳ ಬೆಂಬಲ ಪಡೆಯಲು ಸರ್ಕಾರ ಮುಂದಾಗಿದೆ. ಎಸ್ಪಿ ನಾಯಕರು ಸ್ವಾಧೀನ ಪ್ರಕ್ರಿಯೆ ಯನ್ನು ಸರಳಗೊಳಿಸುವ ಬೇಡಿಕೆಯನ್ನು ಇಟ್ಟಿದ್ದಾರೆ. ಅವರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 7 ಸಂಸದರನ್ನು ಹೊಂದಿರುವ ಬಿಜೆಡಿ ಕೂಡ ವಿಧೇಯಕಕ್ಕೆ ಬೆಂಬಲ ಸೂಚಿಸಿದೆ. ಇನ್ನು ತೃಣಮೂಲ ಕಾಂಗ್ರೆಸ್, ಜೆಡಿಯು ಸೇರಿ ಕೆಲ ಪಕ್ಷಗಳ ಮನವೊಲಿಸಲು ಬಾಕಿಯಿದೆ. ಅವರು ಕನಿಷ್ಠಪಕ್ಷ ಮತದಾನದಿಂದ ದೂರವುಳಿದರೂ ಸಾಕಾಗುತ್ತದೆ ಎಂದೂ ಮೂಲಗಳು ಹೇಳಿವೆ.ಮುಂದಿನ ವಾರ ಸರ್ಕಾರ ಭೂಸ್ವಾಧೀನಕ್ಕೆ ಸಂಬಂಧಿಸಿ ಹೊಸ ಸುಗ್ರೀ ವಾಜ್ಞೆ  ತರಲಿದ್ದು, ಏ.20ರಿಂದ ಆರಂಭ ವಾಗುವ ಅಧಿವೇಶನದ ಮುಂದಿನ ಭಾಗ ದಲ್ಲಿ ಅದು ಮತ್ತೆ ಮಂಡನೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT