ನರೇಂದ್ರ ಮೋದಿ 
ದೇಶ

ಜಾಗತಿಕ ಚಿಂತಕನ ಯುಗಾಂತ್ಯ

ಮಾ.23ರಂದು ನಿಧನರಾದ ಸಿಂಗಾಪುರದ ಸ್ಥಾಪಕ ಮತ್ತು ಮೊದಲ ಪ್ರಧಾನಿ ಲೀ ಕ್ವಾನ್ ಯೂ(91) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಧಾನಿ...

ಸಿಂಗಾಪುರ: ಮಾ.23ರಂದು ನಿಧನರಾದ ಸಿಂಗಾಪುರದ ಸ್ಥಾಪಕ ಮತ್ತು ಮೊದಲ ಪ್ರಧಾನಿ ಲೀ ಕ್ವಾನ್ ಯೂ(91) ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಲೀ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಅವರೊಬ್ಬ ಜಾಗತಿಕ ಚಿಂತಕ ಎಂದು ಬಣ್ಣಿಸಿರುವ ಮೋದಿ, ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಲೀ ಅವರು ವಹಿಸಿದ ಪಾತ್ರವನ್ನು ಇಂದಿಗೂ ಜನರು ನೆನಪಿಸಿಕೊಳ್ಳುತ್ತಾರೆ ಎಂದಿದ್ದಾರೆ. ಭಾನುವಾರ ಸಿಂಗಾಪುರದ ಸಂಸತ್ ಭವನದ ಆವರಣದಲ್ಲಿ ಲೀ ಅವರ ಪಾರ್ಥಿವ ಶರೀರಕ್ಕೆ ಅಂತಿಮ ವಿದಾಯ ಕೋರಿದ ಬಳಿಕ ಪ್ರಧಾನಿ ಮೋದಿ ಮಾತನಾಡಿದರು.
ನಾನು ಅತ್ಯಂತ ಬೇಸರದ ಕ್ಷಣದಲ್ಲಿ ಸಿಂಗಾಪುರಕ್ಕೆ ಭೇಟಿ ನೀಡುತ್ತಿದ್ದೇನೆ. ಲೀ ಅವರ ನಿಧನವು ಒಬ್ಬ ವ್ಯಕ್ತಿಯ ಅಂತ್ಯವಲ್ಲ, ಒಂದು ಯುಗದ ಅಂತ್ಯ. ಅವರು ಕೇವಲ ಆಗ್ನೇಯ ಏಷ್ಯಾಗೆ ಮಾತ್ರವಲ್ಲ, ಸಂಪೂರ್ಣ ಏಷ್ಯಾಗೆ ಸ್ಪೂರ್ತಿ ನೀಡಿದವರು ಎಂದರು ಮೋದಿ. ಭಾರತ ಮತ್ತು ಸಿಂಗಾಪುರದ ಸಂಬಂಧದ ಬಗ್ಗೆಯೂ ಮಾತನಾಡಿದ ಮೋದಿ, ನಮ್ಮದು ವಿಶ್ವದಲ್ಲೇ ಅತ್ಯಂತ ಬಲಿಷ್ಠ ಸಂಬಂಧ ಎಂದರು. ಲೀ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ
ಮೋದಿ ಮಾತ್ರವಲ್ಲದೆ, ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್, ದಕ್ಷಿಣ ಕೊರಿಯಾ ಅಧ್ಯಕ್ಷ ಪಾರ್ಕ್ ಗ್ಯೂನ್ ಹೆ, ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್, ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೊಡೊ ಸೇರಿದಂತೆ ಅನೇಕ ವಿಶ್ವನಾಯಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT