ಸಾಂದರ್ಭಿಕ ಚಿತ್ರ 
ದೇಶ

ಕಪ್ಪುಹಣ ನಿಗ್ರಹಕ್ಕೆ ಹೊಸ ಮಸೂದೆ: ಮುಂದಿನ ವಾರ ಮಂಡನೆ

ಕಪ್ಪುಹಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಮುಂದಿನ ವಾರ ಹೊಸ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಿದೆ...

ನವದೆಹಲಿ: ಕಪ್ಪುಹಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಮುಂದಿನ ವಾರ ಹೊಸ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ದೇಶ ಮತ್ತು ವಿದೇಶದಲ್ಲಿ ತೆರಿಗೆ ತಪ್ಪಿಸಿ ಹಣ ಇಡುವವರಿಗೆ ಕಠಿಣ ಶಿಕ್ಷೆ ವಿಧಿಸಲು ಕಾನೂನನ್ನು ಬಲಪಡಿಸುವ ನಿರ್ಧಾರವನ್ನು ಬಜೆಟ್ ನಲ್ಲಿ ಘೋಷಿಸಿತ್ತು. ಅದರಂತೆ ಈಗ ವಿದೇಶಗಳಲ್ಲಿರುವ ಬಹಿರಂಗಪಡಿಸದ ಆದಾಯ ಮತ್ತು ಸಂಪತ್ತುಗಳ ವಿಧೇಯಕ- 2015 ಅನ್ನು ಬಜೆಟ್ ಅಧಿವೇಶನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ನಿರ್ಧರಿಸಿದೆ.

ಜಾರಿ ನಿರ್ದೇಶನಾಲಯ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಜೇಟ್ಲಿ, ವಿದೇಶದಲ್ಲಿ ತೆರಿಗೆ ತಪ್ಪಿಸಿ ಇಟ್ಟಿರುವ ಹಣ ವಾಪಸ್ ತರಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದೆ. ಕಪ್ಪುಹಣಕ್ಕೆ ಸಂಬಂಧಿಸಿ ಸರ್ಕಾರ ಈಗಾಗಲೇ 121 ಮಂದಿ ವಿರುದ್ಧ ವಿಚಾರಣೆ ಆರಂಭಿಸಿದೆ.
ಅಂತಾರಾಷ್ಟ್ರೀಯ ಸಮುದಾಯವು ಮಾಹಿತಿಯ ಸ್ವಯಂಚಾಲಿತ ವರ್ಗಾವಣೆ ವ್ಯವಸ್ಥೆಯನ್ನು 2017ರಲ್ಲಿ ಜಾರಿಗೆ ತರಲಿದೆ. ಹೀಗಾಗಿ ಇನ್ನು ಮುಂದೆ ವಿದೇಶದಲ್ಲಿ ತೆರಿಗೆ ತಪ್ಪಿಸಿ ಹಣ ಇಡುವುದು ಸಾಧ್ಯವಿಲ್ಲ ಎಂದೂ ಜೇಟ್ಲಿ ಇದೇ ವೇಳೆ ಎಚ್ಚರಿಸಿದರು.

ವಿದೇಶದಲ್ಲಿ ಕಪ್ಪುಹಣ ಇಟ್ಟ ಅನೇಕ ಪ್ರಕರಣಗಳಿವೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ತನಿಖೆ ನಿಧಾನವಾಗುತ್ತಿದೆ. ಈಗಾಗಲೇ ಹಲವು ಪ್ರಕರಣಗಳ ತೆರಿಗೆ ನಿರ್ಧಾರ ಪ್ರಕ್ರಿಯೆ ಮುಗಿದಿದೆ. 121 ಮಂದಿ ವಿರುದ್ಧ ತೆರಿಗೆ ಇಲಾಖೆಯು ವಿಚಾರಣೆ ಆರಂಭಿಸಿದೆ ಎಂದು ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT