ಪ್ರಧಾನಿ ನರೇಂದ್ರ ಮೋದಿ 
ದೇಶ

ಭಗವಾನ್ ಬುದ್ಧನ ಆದರ್ಶಗಳಿಗೆ ದುಃಖವನ್ನು ದೂರ ಮಾಡಬಲ್ಲ ಶಕ್ತಿಯಿದೆ: ಮೋದಿ

ಭಗವಾನ್ ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ...

ನವದೆಹಲಿ: ಭಗವಾನ್ ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ದೆಹಲಿಯ ತಾಳಕಟೋರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬುದ್ಧ ಪೂರ್ಣಿಮೆ ದಿನ ಆಚರಣೆ ಕಾರ್ಯಕ್ರಮದಲ್ಲಿ 31 ದೇಶದ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಮಾತನಾಡಿದ ಮೋದಿ ಅವರು, ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು ಎಂದು ಕರೆ ನೀಡಿದ್ದಾರೆ.

ರಾಜಮನೆತನದಲ್ಲಿ ಹುಟ್ಟಿದ ಭಗವಾನ್ ಬುದ್ಧ ರಾಜವೈಭೋಗವನ್ನು ತ್ಯಜಿಸಿ ವಿರಾಗಿಯಾದ, ರಾಜವೈಭೋಗವನ್ನು ತ್ಯಜಿಸುವುದು ಸುಲಭದ ವಿಷಯವಲ್ಲ ಎಂದರು.

ಬುದ್ಧನ ಜನ್ಮಸ್ಥಳವಾದ ನೇಪಾಳ ಇಂದು ಭೂಕಂಪದಿಂದ ಪೀಡಿತವಾಗಿದೆ. ನಾವೆಲ್ಲರೂ ಭಗವಾನ್ ಬುದ್ಧನ ಪ್ರಾರ್ಥನೆ ಮಾಡಬೇಕಿದೆ. ಭೂಕಂಪ ಪೀಡಿತರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ನೇಪಾಳದಲ್ಲಿ ಭೂಕಂಪಕ್ಕೆ ಸಿಲುಕಿ ನರಳಾಡುತ್ತಿರುವವರ ಕಣ್ಣೀರು ಒರೆಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT