ಪ್ರಧಾನಿ ನರೇಂದ್ರ ಮೋದಿ 
ದೇಶ

ಭಗವಾನ್ ಬುದ್ಧನ ಆದರ್ಶಗಳಿಗೆ ದುಃಖವನ್ನು ದೂರ ಮಾಡಬಲ್ಲ ಶಕ್ತಿಯಿದೆ: ಮೋದಿ

ಭಗವಾನ್ ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ...

ನವದೆಹಲಿ: ಭಗವಾನ್ ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ದೆಹಲಿಯ ತಾಳಕಟೋರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬುದ್ಧ ಪೂರ್ಣಿಮೆ ದಿನ ಆಚರಣೆ ಕಾರ್ಯಕ್ರಮದಲ್ಲಿ 31 ದೇಶದ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಮಾತನಾಡಿದ ಮೋದಿ ಅವರು, ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು ಎಂದು ಕರೆ ನೀಡಿದ್ದಾರೆ.

ರಾಜಮನೆತನದಲ್ಲಿ ಹುಟ್ಟಿದ ಭಗವಾನ್ ಬುದ್ಧ ರಾಜವೈಭೋಗವನ್ನು ತ್ಯಜಿಸಿ ವಿರಾಗಿಯಾದ, ರಾಜವೈಭೋಗವನ್ನು ತ್ಯಜಿಸುವುದು ಸುಲಭದ ವಿಷಯವಲ್ಲ ಎಂದರು.

ಬುದ್ಧನ ಜನ್ಮಸ್ಥಳವಾದ ನೇಪಾಳ ಇಂದು ಭೂಕಂಪದಿಂದ ಪೀಡಿತವಾಗಿದೆ. ನಾವೆಲ್ಲರೂ ಭಗವಾನ್ ಬುದ್ಧನ ಪ್ರಾರ್ಥನೆ ಮಾಡಬೇಕಿದೆ. ಭೂಕಂಪ ಪೀಡಿತರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ನೇಪಾಳದಲ್ಲಿ ಭೂಕಂಪಕ್ಕೆ ಸಿಲುಕಿ ನರಳಾಡುತ್ತಿರುವವರ ಕಣ್ಣೀರು ಒರೆಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT