ಕೇಂದ್ರ ಸಚಿವ ನಿತಿನ್ ಗಡ್ಕರಿ 
ದೇಶ

ಮೂತ್ರ ಹರಿಸಿ ಗಿಡ ಬೆಳೆಸಿ: ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ದೆಹಲಿ ಬಂಗಲೆಯ ಕೈತೋಟ ಹಸಿರಿನಿಂದ ನಳನಳಿಸುತ್ತಿರುವುದರ ಹಿಂದಿನ ರಹಸ್ಯವೇನು ಗೊತ್ತೆ?...

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ದೆಹಲಿ ಬಂಗಲೆಯ ಕೈತೋಟ ಹಸಿರಿನಿಂದ ನಳನಳಿಸುತ್ತಿರುವುದರ ಹಿಂದಿನ ರಹಸ್ಯವೇನು ಗೊತ್ತೆ?

ಅವರು ತೋಟಕ್ಕೆ ನೀರಿನ ಬದಲಿಗೆ ತಮ್ಮ ಮೂತ್ರವನ್ನೇ ಹರಿಸಿ ಗಿಡಗಳನ್ನು ಪೋಷಿಸುತ್ತಿದ್ದಾರೆ. ಇದು ಗಾಳಿಸುದ್ದಿಯೋ ಕುಚೋದ್ಯವೋ ಅಲ್ಲ. ಅವರೇ ಬಹಿರಂಗಪಡಿಸಿದ ಸತ್ಯ. ನಾಗಪುರದಲ್ಲಿ ಸಮಾರಂಭವೊಂದರಲ್ಲಿ ಮಾತನಾಡುತ್ತ ಗಡ್ಕರಿ, ಮೂತ್ರದಂಥ ಅಗ್ಗದ ಗೊಬ್ಬರ ಇನ್ನೊಂದಿಲ್ಲ. ಹಾಗಾಗಿ ತಾವು ಪ್ರತಿದಿನ ತಮ್ಮ ಗಾರ್ಡನ್‍ನ ಗಿಡಗಳಿಗೆ ಮೂತ್ರಧಾರೆ ಎರೆಯುವುದಾಗಿ ಹೇಳಿಕೊಂಡು ಭಾರಿ ವಿವಾದಕ್ಕೆ ಎಡೆಮಾಡಿ ಕೊಟ್ಟಿದ್ದಾರೆ.

ಈಗಾಗಲೇ ಟ್ವಿಟರ್ ಮತ್ತು ಫೇಸ್‍ಬುಕ್‍ನಲ್ಲಿ ಈ ಹೇಳಿಕೆಗೆ ಅಪಾರ ಸಂಖ್ಯೆಯಲ್ಲಿ ವಿರೋಧಗಳು ಹರಿದು ಬಂದಿದ್ದು, ಗಡ್ಕರಿ ಮಾತು ಗೇಲಿಗೊಳಗಾಗಿದೆ. 50ಲೀಟರಿನ ಕ್ಯಾನಿನಲ್ಲಿ ತಮ್ಮ ಮೂತ್ರ ಶೇಖರಿಸಿಟ್ಟಿದ್ದ ಗಡ್ಕರಿ, ಅದನ್ನೇ ಗಿಡಗಳಿಗೆ ಹರಿಸಿದ್ದರಿಂದ, ಗಿಡಗಳ ಬೆಳವಣಿಗೆಯಲ್ಲಿ ವೇಗ ಕಂಡುಬಂದಿದೆ ಎಂದೂ ಅವರು ಸಮರ್ಥಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT