ದೇಶ

ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಪ್ರಕರಣ: ಮಹಿಳಾ ಆಯೋಗದಲ್ಲೇ ಬಿರುಕು

ತಮ್ಮ ಪಕ್ಷದ ಕಾರ್ಯಕರ್ತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್...

ನವದೆಹಲಿ: ತಮ್ಮ ಪಕ್ಷದ ಕಾರ್ಯಕರ್ತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಮಂಗಳವಾರ ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿಲ್ಲ.

ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದಲ್ಲೇ ಬಿರುಕು ಉಂಟಾಗಿದ್ದು, ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಬರ್ಖಾ ಶುಕ್ಲಾ ಸಿಂಗ್ ಅವರು ಸುದ್ದಿಗೋಷ್ಠಿಯನ್ನು ಮುಗಿಸಿ ಹೊರಡಬೇಕು ಎನ್ನುವಾಗ, ಪಕ್ಕದಲ್ಲೇ ಕುಳಿತಿದ್ದ ಆಯೋಗದ ಮತ್ತೊಬ್ಬ ಸದಸ್ಯೆ ಇದೊಂದು ಕುಮಾರ್ ವಿಶ್ವಾಸ್ ವಿರುದ್ಧದ ರಾಜಕೀಯ ಪಿತೂರಿ ಪ್ರಕರಣ ಎಂದರು.

ತಕ್ಷಣವೇ ಎಚ್ಚೆತ್ತುಕೊಂಡ ಆಯೋಗದ ಮುಖ್ಯಸ್ಥೆ, ಈ ಕುರಿತು ಹೇಳಿಕೆ ನೀಡದಂತೆ ಸದಸ್ಯೆ ಜುಹಿ ಖಾನ್ ಅವರನ್ನು ತಡೆದರು. ಅಲ್ಲದೆ ಆಮ್ ಆದ್ಮಿ ಪಕ್ಷವೇ ಸುದ್ದಿಗೋಷ್ಠಿಗೆ ಅಡ್ಡಿಪಡಿಸುವಂತೆ ಖಾನ್ ಅವರನ್ನು ಇಲ್ಲಿಗೆ ಕಳುಹಿಸಿದೆ ಎಂದು ಆರೋಪಿಸಿದರು. ಬಳಿಕ ಖಾನ್ ದೆಹಲಿ ಮಹಿಳಾ ಆಯೋಗದ ಸದಸ್ಯೆ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಿದರು.

ಈ ನಾಟಕೀಯ ಬೆಳವಣಿಗೆಗೂ ಮುನ್ನ, ತನಗೆ ದೆಹಲಿ ಮಹಿಳಾ ಆಯೋಗದ ನೋಟಿಸ್ ತಲುಪಿಲ್ಲ ಎಂಬ ಕುಮಾರ್ ವಿಶ್ವಾಸ್ ಹೇಳಿಕೆಯನ್ನು ತಳ್ಳಿಹಾಕಿದ ಸಿಂಗ್, ಆಪ್ ನಾಯಕ ಸುಳ್ಳು ಹೇಳುತ್ತಿದ್ದಾರೆ. ಶನಿವಾರವೇ ಅವರ ವಸುಂಧರ ನಿವಾಸಕ್ಕೆ ನೋಟಿಸ್ ತಲುಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಈ ಸಂಬಂಧ ಕುಮಾರ್ ವಿಶ್ವಾಸ್ ಅವರಿಗೆ ಮಹಿಳಾ ಆಯೋಗ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು, ನಾಳೆ ಮಧ್ಯಾಹ್ನ 12 ಗಂಟೆಯೊಳಗೆ ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಸಿಂಗ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT