ದೇಶ

ಕುಮಾರ್ ವಿಶ್ವಾಸ್ ಅಕ್ರಮ ಸಂಬಂಧ ಪ್ರಕರಣ: ಮಹಿಳಾ ಆಯೋಗದಲ್ಲೇ ಬಿರುಕು

ತಮ್ಮ ಪಕ್ಷದ ಕಾರ್ಯಕರ್ತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್...

ನವದೆಹಲಿ: ತಮ್ಮ ಪಕ್ಷದ ಕಾರ್ಯಕರ್ತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಮಂಗಳವಾರ ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿಲ್ಲ.

ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದಲ್ಲೇ ಬಿರುಕು ಉಂಟಾಗಿದ್ದು, ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಬರ್ಖಾ ಶುಕ್ಲಾ ಸಿಂಗ್ ಅವರು ಸುದ್ದಿಗೋಷ್ಠಿಯನ್ನು ಮುಗಿಸಿ ಹೊರಡಬೇಕು ಎನ್ನುವಾಗ, ಪಕ್ಕದಲ್ಲೇ ಕುಳಿತಿದ್ದ ಆಯೋಗದ ಮತ್ತೊಬ್ಬ ಸದಸ್ಯೆ ಇದೊಂದು ಕುಮಾರ್ ವಿಶ್ವಾಸ್ ವಿರುದ್ಧದ ರಾಜಕೀಯ ಪಿತೂರಿ ಪ್ರಕರಣ ಎಂದರು.

ತಕ್ಷಣವೇ ಎಚ್ಚೆತ್ತುಕೊಂಡ ಆಯೋಗದ ಮುಖ್ಯಸ್ಥೆ, ಈ ಕುರಿತು ಹೇಳಿಕೆ ನೀಡದಂತೆ ಸದಸ್ಯೆ ಜುಹಿ ಖಾನ್ ಅವರನ್ನು ತಡೆದರು. ಅಲ್ಲದೆ ಆಮ್ ಆದ್ಮಿ ಪಕ್ಷವೇ ಸುದ್ದಿಗೋಷ್ಠಿಗೆ ಅಡ್ಡಿಪಡಿಸುವಂತೆ ಖಾನ್ ಅವರನ್ನು ಇಲ್ಲಿಗೆ ಕಳುಹಿಸಿದೆ ಎಂದು ಆರೋಪಿಸಿದರು. ಬಳಿಕ ಖಾನ್ ದೆಹಲಿ ಮಹಿಳಾ ಆಯೋಗದ ಸದಸ್ಯೆ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಿದರು.

ಈ ನಾಟಕೀಯ ಬೆಳವಣಿಗೆಗೂ ಮುನ್ನ, ತನಗೆ ದೆಹಲಿ ಮಹಿಳಾ ಆಯೋಗದ ನೋಟಿಸ್ ತಲುಪಿಲ್ಲ ಎಂಬ ಕುಮಾರ್ ವಿಶ್ವಾಸ್ ಹೇಳಿಕೆಯನ್ನು ತಳ್ಳಿಹಾಕಿದ ಸಿಂಗ್, ಆಪ್ ನಾಯಕ ಸುಳ್ಳು ಹೇಳುತ್ತಿದ್ದಾರೆ. ಶನಿವಾರವೇ ಅವರ ವಸುಂಧರ ನಿವಾಸಕ್ಕೆ ನೋಟಿಸ್ ತಲುಪಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಈ ಸಂಬಂಧ ಕುಮಾರ್ ವಿಶ್ವಾಸ್ ಅವರಿಗೆ ಮಹಿಳಾ ಆಯೋಗ ಮತ್ತೊಂದು ನೋಟಿಸ್ ಜಾರಿ ಮಾಡಿದ್ದು, ನಾಳೆ ಮಧ್ಯಾಹ್ನ 12 ಗಂಟೆಯೊಳಗೆ ಮಹಿಳಾ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಸಿಂಗ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT