ಕಲ್ಲಿದ್ದಲು 
ದೇಶ

ಕಲ್ಲಿದ್ದಲು ಹಗರಣ: ನವೀನ್‌ ಜಿಂದಾಲ್‌, ಮಾಜಿ ಸಿಎಂ ಮಧು ಕೋಡಾ ಸೇರಿ 13 ಆರೋಪಿಗಳಿಗೆ ಸಮನ್ಸ್‌

ಕಲ್ಲಿದ್ದಲು ಹಗರಣ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಕಾಂಗ್ರೆಸ್ ಮುಖಂಡರೂ ಆಗಿರುವ ಉದ್ಯಮಿ ನವೀನ್‌...

ನವದೆಹಲಿ: ಕಲ್ಲಿದ್ದಲು ಹಗರಣ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಕಾಂಗ್ರೆಸ್ ಮುಖಂಡರೂ ಆಗಿರುವ ಉದ್ಯಮಿ ನವೀನ್‌ ಜಿಂದಾಲ್‌ ಸೇರಿದಂತೆ 13 ಆರೋಪಿಗಳಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಸಮನ್ಸ್‌ ಜಾರಿಗೊಳಿಸಿದೆ.

ಜಾರ್ಖಂಡ್‌ನ ಅಮರಕೊಂಡ ಮುರ್ಗದಂಗಲ್ ಕಲ್ಲಿದ್ದಲ್ಲು ನಿಕ್ಷೇಪ ಹಂಚಿಕೆ ಪ್ರಕರಣ ಸಂಬಂಧ, ಮೇ 22 ರಂದು ಹಾಜರಾಗುವಂತೆ ಸೂಚಿಸಿ ಸಿಬಿಐ ವಿಶೇಷ ನ್ಯಾಯಾಧೀಶ ಭರತ್‌ ಪರಶಾರ್ ಅವರು ಸಮನ್ಸ್ ಜಾರಿಗೊಳಿಸಿದ್ದಾರೆ.

ಪ್ರಕರಣ ಸಂಬಂಧ ಏಪ್ರಿಲ್ 29ರಂದು ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಆಧರಿಸಿ, ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 120ಬಿ, 420 ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಕಲಂಗಳಡಿ ಸಿಬಿಐ ದೋಷಾರೋಪ ಸಲ್ಲಿಸಿತ್ತು.

ಜಿಂದಾಲ್, ಕೋಡಾ ಅವರಲ್ಲದೇ ಯುಪಿಎ ಅವಧಿಯಲ್ಲಿ ಕಲ್ಲಿದ್ದಲು ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದ ದಾಸರಿ ನಾರಾಯಣರಾವ್, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ, ಜ್ಞಾನ ಸ್ವರೂಪ್ ಗರ್ಗ್, ಸುರೇಶ್ ಸಿಂಘಾಲ್, ರಾಜೀವ್ ಜೈನ್, ಗಿರೀಶ್ ಕುಮಾರ್ ಸುನೆಜಾ, ಆರ್.ಕೆ.ಸರಫ್ ಹಾಗೂ ರಾಮಕೃಷ್ಣ ಪ್ರಸಾದ್ ಅವರಿಗೆ ಪಡೆದಿರುವ ಇತರೆ ಆರೋಪಿಗಳು. ಇದಲ್ಲದೇ, ಐದು ಕಂಪೆನಿಗಳಿಗೂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT