ಕಲ್ಲಿದ್ದಲು 
ದೇಶ

ಕಲ್ಲಿದ್ದಲು ಹಗರಣ: ನವೀನ್‌ ಜಿಂದಾಲ್‌, ಮಾಜಿ ಸಿಎಂ ಮಧು ಕೋಡಾ ಸೇರಿ 13 ಆರೋಪಿಗಳಿಗೆ ಸಮನ್ಸ್‌

ಕಲ್ಲಿದ್ದಲು ಹಗರಣ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಕಾಂಗ್ರೆಸ್ ಮುಖಂಡರೂ ಆಗಿರುವ ಉದ್ಯಮಿ ನವೀನ್‌...

ನವದೆಹಲಿ: ಕಲ್ಲಿದ್ದಲು ಹಗರಣ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಹಾಗೂ ಕಾಂಗ್ರೆಸ್ ಮುಖಂಡರೂ ಆಗಿರುವ ಉದ್ಯಮಿ ನವೀನ್‌ ಜಿಂದಾಲ್‌ ಸೇರಿದಂತೆ 13 ಆರೋಪಿಗಳಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಸಮನ್ಸ್‌ ಜಾರಿಗೊಳಿಸಿದೆ.

ಜಾರ್ಖಂಡ್‌ನ ಅಮರಕೊಂಡ ಮುರ್ಗದಂಗಲ್ ಕಲ್ಲಿದ್ದಲ್ಲು ನಿಕ್ಷೇಪ ಹಂಚಿಕೆ ಪ್ರಕರಣ ಸಂಬಂಧ, ಮೇ 22 ರಂದು ಹಾಜರಾಗುವಂತೆ ಸೂಚಿಸಿ ಸಿಬಿಐ ವಿಶೇಷ ನ್ಯಾಯಾಧೀಶ ಭರತ್‌ ಪರಶಾರ್ ಅವರು ಸಮನ್ಸ್ ಜಾರಿಗೊಳಿಸಿದ್ದಾರೆ.

ಪ್ರಕರಣ ಸಂಬಂಧ ಏಪ್ರಿಲ್ 29ರಂದು ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಆಧರಿಸಿ, ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ 120ಬಿ, 420 ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಕಲಂಗಳಡಿ ಸಿಬಿಐ ದೋಷಾರೋಪ ಸಲ್ಲಿಸಿತ್ತು.

ಜಿಂದಾಲ್, ಕೋಡಾ ಅವರಲ್ಲದೇ ಯುಪಿಎ ಅವಧಿಯಲ್ಲಿ ಕಲ್ಲಿದ್ದಲು ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದ ದಾಸರಿ ನಾರಾಯಣರಾವ್, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಎಚ್.ಸಿ.ಗುಪ್ತಾ, ಜ್ಞಾನ ಸ್ವರೂಪ್ ಗರ್ಗ್, ಸುರೇಶ್ ಸಿಂಘಾಲ್, ರಾಜೀವ್ ಜೈನ್, ಗಿರೀಶ್ ಕುಮಾರ್ ಸುನೆಜಾ, ಆರ್.ಕೆ.ಸರಫ್ ಹಾಗೂ ರಾಮಕೃಷ್ಣ ಪ್ರಸಾದ್ ಅವರಿಗೆ ಪಡೆದಿರುವ ಇತರೆ ಆರೋಪಿಗಳು. ಇದಲ್ಲದೇ, ಐದು ಕಂಪೆನಿಗಳಿಗೂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT