ಸುಂಟರಗಾಳಿಯಿಂದಾಗಿ ಹಾನಿಗೊಳಗಾದ ಪ್ರದೇಶ (ಸಂಗ್ರಹ ಚಿತ್ರ) 
ದೇಶ

ಒಕ್ಲಹಾಮಾದಲ್ಲಿ ಭೀಕರ ಸುಂಟರಗಾಳಿ

ಅಮೆರಿಕದ ಒಕ್ಲಹಾಮದಲ್ಲಿ ಕಳೆದ ರಾತ್ರಿ ಸಂಭವಿಸಿದ ಭೀಕರ ಸರಣಿ ಸುಂಟರಗಾಳಿಗೆ ನೂರಾರು ಮನೆಗಳು ಧ್ವಂಸವಾಗಿವೆ ಎಂದು ತಿಳಿದುಬಂದಿದೆ.

ಒಕ್ಲಹಾಮ: ಅಮೆರಿಕದ ಒಕ್ಲಹಾಮದಲ್ಲಿ ಕಳೆದ ರಾತ್ರಿ ಸಂಭವಿಸಿದ ಭೀಕರ ಸರಣಿ ಸುಂಟರಗಾಳಿಗೆ ನೂರಾರು ಮನೆಗಳು ಧ್ವಂಸವಾಗಿವೆ ಎಂದು ತಿಳಿದುಬಂದಿದೆ.

ಸ್ಥಳೀಯ ಸಮಯ ಸಂಜೆ ಸುಮಾರು 4.30ರ ವೇಳೆಗೆ ಸಣ್ಣ ಪ್ರಮಾಣದಲ್ಲಿ ಆರಂಭವಾದ ಸುಂಟರಗಾಳಿ ಕ್ರಮೇಣ ತನ್ನ ವೇಗವನ್ನು ಗಣನೀಯವಾಗಿ ಹೆಚ್ಚಳ ಮಾಡಿಕೊಂಡಿತು. ಒಂದರ ಹಿಂದೊಂದರಂತೆ ಸರಣಿ ಸುಂಟರಗಾಳಿ ಸಷ್ಟಿಯಾಗಿದ್ದು, ಸುಂಟರಗಾಳಿಗೆ ಸಿಕ್ಕ ಎಲ್ಲ ವಸ್ತುಗಳನ್ನು ವೇಗವಾದ ಗಾಳಿ ಹೊತ್ತೊಯ್ದಿದೆ. ಸಾಕಷ್ಟು ಮನೆಗಳು, ಕಟ್ಟಡಗಳು ಹಾನಿಗೊಳಗಾಗಿದ್ದು, ಸಾವಿರಾರು ಜನರು ಸೂರಿಲ್ಲದೆ ನಿರಾಶ್ರಿತರಾಗಿದ್ದಾರೆ.

ಪ್ರಸ್ತುತ ಸ್ಥಳೀಯ ಕಾರ್ಪೊರೇಷನ್ ನ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮಾಡುತ್ತಿದ್ದು, ಸುಂಟರಗಾಳಿ ಹೊಡೆತಕ್ಕೆ ಒಕ್ಲಹಾಮಾದ ಕ್ರೀಕ್ ಮೇಲ್ಸೆತುವೆ, ಬ್ಲಾಂಚರ್ಡ್ ಪ್ರದೇಶ, ನಾರ್ಮನ್ ಅಂಡ್ ಕ್ಯಾಸಲ್ ಪ್ರದೇಶಗಳು ಹಾನಿಗೊಳಗಾಗಿವೆ ಎಂದು ಹೇಳಲಾಗುತ್ತಿದೆ. ಇನ್ನು 24 ಗಂಟೆಗಳ ಕಾಲ ಪರಿಸ್ಥಿತಿ ಹೀಗೆ ಮುಂದುವರೆಯುತ್ತದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಒಕ್ಲಹಾಮಾ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಲ್ಲದೆ ಅಲ್ಲಿರುವ ಎಲ್ಲ ಸಿಬ್ಬಂದಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ರವಾನೆ ಮಾಡಲಾಗಿದೆ.

ಇದೇ ವೇಳೆ ಸುಂಟರಗಾಳಿ ಪ್ರಭಾವದಿಂದಾಗಿ ಒಕ್ಲಹಾಮಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಹೀಗಾಗಿ ನದಿಗೆ ಇಳಿಯದಂತೆ ಭದ್ರತಾ ಪಡೆಗಳು ನಿವಾಸಿಗಳನ್ನು ಎಚ್ಚರಿಸಿದ್ದಾರೆ. ಸುಂಟರಾಗಾಳಿ ರಭಸಕ್ಕೆ ಒಕ್ಲಹಾಮಾದಲ್ಲಿರುವ ಹುಲಿ ಸಂರಕ್ಷಿತಾರಣ್ಯ ಪ್ರದೇಶಕ್ಕೂ ಹಾನಿಯಾಗಿದ್ದು, ಎಲ್ಲ ಪ್ರಾಣಿಗಳು ಅಪಾಯದಿಂದ ಪಾರಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಟ್ಟಾರೆ ನಿನ್ನೆ ಸಂಜೆ ಸಂಭವಿಸಿದ ಸುಂಟರಗಾಳಿಯಿಂದಾಗಿ ಅಮೆರಿಕದ ಒಕ್ಲಹಾಮಾದಲ್ಲಿ ಜನಜೀವನ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT