ನರೇಂದ್ರ ಮೋದಿ 
ದೇಶ

ದಂತೆವಾಡಕ್ಕೆ ಪ್ರಧಾನಿ ಭೇಟಿ: ನಕ್ಸಲರಿಂದ ರೈಲ್ವೆ ಮಾರ್ಗ ಸ್ಫೋಟ, 500 ಗ್ರಾಮಸ್ಥರ ಒತ್ತೆ

ಪ್ರಧಾನಿ ನರೇಂದ್ರ ಮೋದಿ ಅವರು ನಕ್ಸಲ್ ಪೀಡಿತ ಪ್ರದೇಶ ದಂತೆವಾಡ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಛತ್ತೀಸ್‌ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು,...

ರಾಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ನಕ್ಸಲ್ ಪೀಡಿತ ಪ್ರದೇಶ ದಂತೆವಾಡ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಛತ್ತೀಸ್‌ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, 5 ಕಿ.ಮೀ. ರೈಲ್ವೆ ಮಾರ್ಗ ಸ್ಫೋಟಿಸಿದ್ದಾರೆ. ಮತ್ತೊಂದಡೆ 500 ಗ್ರಾಮಸ್ಥರನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ದಂತೆವಾಡ ಜಿಲ್ಲೆಯ ಕಿರಂದೂಲ್ ಸಮೀಪ ಸುಮಾರು 5 ಕಿ.ಮೀ ರೈಲ್ವೆ ಮಾರ್ಗವನ್ನು ನಕ್ಸಲರು ಸ್ಫೋಟಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಅವರ ರ್ಯಾಲಿಗೆ ತೆರಳುತ್ತಿದ್ದ ಸುಕ್ಮಾ ಜಿಲ್ಲೆಯ ಮರೇಂಗಾದ 500 ಗ್ರಾಮಸ್ಥರನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.

ದಂತೆವಾಡಾದಲ್ಲಿ ವಿವಿಧ ಅಭಿೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಛತ್ತೀಸ್ ಗಢಕ್ಕೆ ಭೇಟಿ ನೀಡಿದ್ದು, ಕಾರ್ಯಕ್ರಮಕ್ಕೆ ಆಗಮಸುತ್ತಿದ್ದ 500ಕ್ಕೂ ಅಧಿಕ ಗ್ರಾಮಸ್ಥರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದೇ ವೇಳೆ ಮೋದಿ ಅವರು ಅಲ್ಟ್ರಾ ಮೆಗಾ ಉಕ್ಕು ಘಟಕ ಮತ್ತು ರಾವ್‌ಘಾಟ್‌-ಜಗದಲ್‌ಪುರ ರೈಲ್ವೆ ಮಾರ್ಗದ ಎರಡನೇ ಹಂತವನ್ನೂ ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT