ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಏಕಾಂಗಿ ದೆಹಲಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಏಕಾಂಗಿ ದೆಹಲಿಯಿಂದ ಭಾರತದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು..

ಕೋಲ್ಕತಾ: ಏಕಾಂಗಿ ದೆಹಲಿಯಿಂದ ಭಾರತದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಎರಡನೇ ಬಾರಿಗೆ ಭೇಟಿ ನೀಡಿರುವ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಬಂಗಾಳಕ್ಕೆ ಭೇಟಿ ನೀಡಿದ್ದಾರೆ. ಪಶ್ಚಿಮ ಬಂಗಾಳದ ಬರ್ನಾಪುರದಲ್ಲಿ ಸ್ಫಾಪನೆಯಾಗಿರುವ 16 ಸಾವಿರ ಕೋಟಿ ಮೌಲ್ಯದ ಉಕ್ಕಿನ ಕಾರ್ಖಾನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ರಾಜ್ಯ ಅಭಿವೃದ್ಧಿಯಲ್ಲಿ ಯಶಸ್ಸಿನ ಹೊಸ ಶಿಖರ ತುಲುಪುವುದನ್ನು ನಾನು ನೋಡ ಬಯಸುತ್ತೇನೆ. ಕೇವಲ ಒಂದು ವರ್ಷದಲ್ಲಿ ಭಾರತ ದೇಶದ ಬಗೆಗಿನ ದೃಷ್ಟಿಕೋನ ಬದಲಾಗಿದೆ.

ಹಾವುಗಳ ದೇಶ ಎಂದು ಹೀಗಳೆಯುತ್ತಿದ್ದವರು ಇಂದು ಭಾರತ ದೇಶವನ್ನು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶ ಎಂದು ಹೊಗಳುತ್ತಿದ್ದಾರೆ. ಭಾರತ ದೇಶದ ಅಭಿವೃದ್ಧಿಯ ಪ್ರಮುಖ ಮೂರು ಮೂಲಗಳಲ್ಲಿದ್ದು, ಫಲವತ್ತಾದ ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲ ಮತ್ತು ಈ ದೇಶದ ಕೌಶಲ್ಯಯುಕ್ತ ಯುವಕರ ಕೈಯಲ್ಲಿ ಭಾರತದ ಅಭಿವೃದ್ಧಿ ಇದೆ. ನಾವು ಈ ಮಾರ್ಗದಲ್ಲಿ ನಮ್ಮ ಮುಂದಿನ ಭವಿಷ್ಯವನ್ನು ಚಿಂತಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

2014ರಲ್ಲಿ ಕಲ್ಲಿದ್ದಲು ಹಗರಣದ ಭಾರಿ ಸುದ್ದಿಗಳು ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದವು. ಆದರೆ ಈಗ ನಮ್ಮ ಸರ್ಕಾರ ಕೆಲ ನೀತಿಗಳಲ್ಲಿ ಬದಲಾವಣೆ ಮಾಡಿದ್ದು, ಈಗ ಹಗರಣದ ಬಗ್ಗೆಯಲ್ಲ ಕಲ್ಲಿದ್ದಲು ಹರಾಜು ಪ್ರಕ್ರಿಯೆ ಬಗ್ಗೆ ಸುದ್ದಿಗಳು ಪ್ರಸಾರವಾಗುತ್ತಿವೆ. ಕಲ್ಲಿದ್ದಲು ಹರಾಜು ಪ್ರಕ್ರಿಯೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಇದೀಗ ಸುಮಾರು 3 ಲಕ್ಷ ಕೋಟಿ ರು.ಗಳು ಸಂದಾಯವಾಗಿವೆ. ಇದು ನಮ್ಮ ಸರ್ಕಾರಕ್ಕಿರುವ ಬದ್ಧತೆಯನ್ನು ತೋರಿಸುತ್ತದೆ.

ನಮ್ಮ ಸರ್ಕಾರ ಎರಡನೇ ಹಸಿರು ಕ್ರಾಂತಿಯ ಕನಸು ಕಾಣುತ್ತಿದ್ದು, ದೇಶದ ಪೂರ್ವ ದಿಕ್ಕಿನ ರಾಜ್ಯಗಳು ಈ ಬಗ್ಗೆ ಅಪಾರ ಸಾಮರ್ಥ್ಯವನ್ನು ಹೊಂದಿದೆ. ಕೋಲ್ಕತಾದಿಂದ ಪಶ್ಚಿಮ ಬಂಗಾಳವನ್ನು ಬಲಪಡಿಸಲು ಸಾಧ್ಯವಾಗದೇ ಹೋದರೆ ಪೂರ್ವ ವಲಯದ ರಾಜ್ಯಗಳು ಕೂಡ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಹೀಗಾಗಿ ದೇಶದ ಪೂರ್ವ ರಾಜ್ಯಗಳನ್ನು ಬಲಪಡಿಸುವ ಮೂಲಕ ಅಭಿವೃದ್ಧಿ ಸಾಧಿಸುವುದು ನಮ್ಮ ಗುರಿಯಾಗಿದೆ.

ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳು ಅಗತ್ಯ ಸಹಕಾರ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಟೀಂ ಇಂಡಿಯಾ ಮಾದರಿಯಲ್ಲಿ ಒಟ್ಟಾಗಿ ದುಡಿಯಬೇಕು. ಆಗ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT