ವ್ಯಾಪಮ್ ಹಗರಣ 
ದೇಶ

ವ್ಯಾಪಮ್ ಹಗರಣ: ಇನ್ನೊಬ್ಬ ಆರೋಪಿ ಸಾವು

ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದ ಆರೋಪಿಗಳಲ್ಲಿ 8ನೇ ಆರೋಪಿ ವಿಜಯ್ ಸಿಂಗ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ...

ಭೋಪಾಲ್: ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದ ಆರೋಪಿಗಳಲ್ಲಿ 8ನೇ ಆರೋಪಿ ವಿಜಯ್ ಸಿಂಗ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಛತ್ತೀಸ್‍ಗಢದ ಕಾಂಕೇರ್ ಜಿಲ್ಲೆಯ ಲಾಡ್ಜ್‍ವೊಂದರಲ್ಲಿ ಶವ ಪತ್ತೆಯಾಗಿದೆ.

ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಈತ ವೃತ್ತಿಯಲ್ಲಿಫಾರ್ಮಸಿಸ್ಟ್ ಆಗಿದ್ದ. ಅಲ್ಲದೇ, ಹಲವು ರಾಜಕೀಯ ವ್ಯಕ್ತಿಗಳ ಜತೆ ಒಡನಾಟ ಇಟ್ಟುಕೊಂಡಿದ್ದ. ವಿಜಯ್ ಸಿಂಗ್ ಕತ್ತು, ಮೊಣಕೈ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದರಿಂದ ಕೊಲೆ ನಡೆದಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಎದುರು ನೋಡುತ್ತಿದ್ದಾರೆ.

ಇತ್ತೀಚೆಗಷ್ಟೇ ವ್ಯಾಪಮ್ ಹಗರಣದ ಪ್ರಮುಖ ಆರೋಪಿ ಮಧ್ಯಪ್ರದೇಶ ಗವರ್ನರ್ ರಾಮ್ ನರೇಶ್ ಯಾದವ್ ಅವರ ಪುತ್ರ ಶೈಲೇಶ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಮಧ್ಯಪ್ರದೇಶ ವೃತ್ತಿಪರ ಶಿಕ್ಷಣ ಇಲಾಖೆಯ ಪರೀಕ್ಷಾ ಮಂಡಳಿಯಲ್ಲಿ ಕೋಟ್ಯಂತರ ಹಣ ದುರುಪಯೋಗವಾಗಿದೆ ಎಂದು ಲೆಕ್ಕ ಪರಿಶೋಧನ ವರದಿಯಿಂದ ಬೆಳಕಿಗೆ ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದು ದೆಹಲಿಯಲ್ಲಿ ಚುನಾವಣೆ ನಡೆಸಿ... BJP 10 ಸ್ಥಾನ ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ: ಕೇಜ್ರಿವಾಲ್ ಸವಾಲು

ಹುಬ್ಬಳ್ಳಿ: ಕರ್ನಾಟಕದ ವಿರುದ್ಧ ಗೆದ್ದು ಚೊಚ್ಚಲ Ranji Trophy ತೆಗೆದುಕೊಂಡು ಹೋಗ್ತೀವಿ - ಜಮ್ಮು-ಕಾಶ್ಮೀರ ಸಿಎಂ

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

Ranji Final: ಚೊಚ್ಚಲ ಪ್ರಶಸ್ತಿ ಗೆಲುವಿನ ಸನಿಹದಲ್ಲಿ ಜಮ್ಮು-ಕಾಶ್ಮೀರ; ತವರಿನಲ್ಲೇ ಕರ್ನಾಟಕಕ್ಕೆ ದೊಡ್ಡ ಹಿನ್ನಡೆ!

ಈ ರಸ್ತೆ ಮುಸ್ಲಿಮರಿಗಲ್ಲ: ಡೆಹ್ರಾಡೂನ್-ದೆಹಲಿ ಎಕ್ಸ್‌ಪ್ರೆಸ್‌ವೇಯಲ್ಲಿ ಯುವತಿಯರು ಬರೆಯುತ್ತಿರುವ ವಿಡಿಯೋ ವೈರಲ್!

SCROLL FOR NEXT