ಜಯಲಲಿತಾ 
ದೇಶ

ಹೈಕೋರ್ಟ್ ತೀರ್ಪಿನಿಂದ ಕುಲುಮೆಯಲ್ಲಿ ಕಾಯ್ದ ಬಳಿಕ ಹೊಳೆಯುವ ಚಿನ್ನದಂತಾಗಿದ್ದೇನೆ: ಜಯಾ

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ಎರಡು ದಿನಗಳ ಕಾಲ ಮುಖ್ಯಮಂತ್ರಿ...

ಚೆನ್ನೈ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು, ಎರಡು ದಿನಗಳ ಕಾಲ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡದಂತೆ ಸಿಎಂ ಓ.ಪನ್ನೀರ್ ಸೆಲ್ವಂ ಅವರಿಗೆ ಸೋಮವಾರ ಸೂಚಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ಜಯಲಲಿತಾ ಅವರು ನಿರ್ದೋಷಿ ಎಂದು ತೀರ್ಪು ನೀಡುತ್ತಿದ್ದಂತೆ, ಪನ್ನೀರ್ ಸೆಲ್ವಂ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಎಲ್ಲರಿಂದಲೂ ಅಭಿನಂದನೆ ಸ್ವೀಕರಿಸಿದ ಜಯಾ, ನಂತರ ಪನ್ನೀರ್ ಸೆಲ್ವಂ ಅವರೊಂದಿಗೆ ಚರ್ಚೆ ನಡೆಸಿದರು. ಚರ್ಚೆಯ ವೇಳೆ ಇನ್ನೂ ಎರಡು ದಿನ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡದಂತೆ ಪನ್ನೀರ್ ಸೆಲ್ವಂಗೆ ಜಯಲಲಿತಾ ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನು ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ತಮಿಳುನಾಡು ಮಾಜಿ ಸಿಎಂ, ರಾಜಕೀಯ ದುರುದ್ದೇಶದ ಸುಳಿಯಿಂದ ನನಗೆ ಮುಕ್ತಿ ಸಿಕ್ಕಿದೆ. ತೀರ್ಪಿನಿಂದ ನಾನು ತಪ್ಪು ಮಾಡಿಲ್ಲ ಎಂಬುದು ಸಾಬೀತಾಗಿದೆ ಮತ್ತು ಇದರಿಂದ ನನಗೆ ಮತ್ತಷ್ಟು ಮೆರಗು ಸಿಕ್ಕಂತಾಗಿದೆ. ಕುಲುಮೆಯಲ್ಲಿ ಕಾಯ್ದ ಬಳಿಕ ಹೊಳೆಯುವ ಚಿನ್ನದಂತಾಗಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಎಐಎಡಿಎಂಕೆ ಕಾರ್ಯಕತರು ಯಾರೂ ತಮ್ಮ ನಿವಾಸದ ಬಳಿ ಬರಬಾರದು. ಎಲ್ಲರೂ ತಮ್ಮ ತಮ್ಮ ದೇವರಲ್ಲಿ ಪ್ರಾರ್ಥನೆ ಮಾಡಲಿ ಎಂದು ಜಯಲಲಿತಾ ಪಕ್ಷದ ಕಾರ್ಯರಿಗೆ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT