ಕೇಂದ್ರ ಸಚಿವೆ ಸ್ಮೃತಿ ಇರಾನಿ 
ದೇಶ

ಅಮೇಥಿ ಫುಡ್ ಪಾರ್ಕ್: ರಾಹುಲ್ ವಿರುದ್ಧ ಕಿಡಿಕಾರಿದ ಸ್ಮೃತಿ ಇರಾನಿ

ಅಮೇಥಿ ಫುಡ್ ಪಾರ್ಕ್ ಕುರಿತಂತೆ ರಾಹುಲ್ ವಿರುದ್ಧ ವಾಗ್ಧಾಳಿ ಮುಂದುವರೆಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರ್ಪೋರೇಟ್ ಕಂಪನಿಗಳಿಂದ ಲಾಭ ಪಡೆಯುವ ಸಲುವಾಗಿ ರಾಹುಲ್ ಗಾಂಧಿ ರೈತರನ್ನು ತಿರಸ್ಕರಿಸುತ್ತಿದ್ದಾರೆ ಎಂದು ಹೇಳಿದ್ದಾರೆ...

ಅಮೇಥಿ: ಅಮೇಥಿ ಫುಡ್ ಪಾರ್ಕ್ ಕುರಿತಂತೆ ರಾಹುಲ್ ವಿರುದ್ಧ ವಾಗ್ಧಾಳಿ ಮುಂದುವರೆಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರ್ಪೋರೇಟ್ ಕಂಪನಿಗಳಿಂದ ಲಾಭ ಪಡೆಯುವ ಸಲುವಾಗಿ ರಾಹುಲ್ ಗಾಂಧಿ ರೈತರನ್ನು ತಿರಸ್ಕರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಕಾಲಿಕ ಮಳೆಯಿಂದ ಅಪಾರ ನಷ್ಟದಲ್ಲಿರುವ ರೈತರ ಸಮಸ್ಯೆ ಅರಿಯಲು ಇಂದು ಅಮೇಥಿಗೆ ಭೇಟಿ ನೀಡಿರುವ ಸ್ಮೃತಿ ಇರಾನಿ ಅವರು, ರಾಹುಲ್ ಗಾಂಧಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಅಮೇಥಿ ಕುರಿತಂತೆ ಮೊದಲ ಬಾರಿಗೆ ರಾಹುಲ್ ಭಾಷಣ ಮಾಡಿದ್ದಾಗ ಅವರ ಮಾತು ಕೇವಲ ವ್ಯವಹಾರಿಕವಾಗಿತ್ತು. ರೈತರ ಪರವಾಗಿರಲಿಲ್ಲ. ಬೇಕಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರದ ಸಂದರ್ಭದಲ್ಲಿದ್ದ ಕಡತಗಳನ್ನು ಪರಿಶೀಲಿಸಿದರೆ ಸತ್ಯಾಂಶ ತಿಳಿದುಕೊಳ್ಳಬಹುದು.

ಅಮೇಥಿ ಫುಡ್ ಪಾರ್ಕ್ ಯೋಜನೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಂದಿದ್ದು, ಈ ಯೋಜನೆಗೆ ಸರ್ಕಾರ 2010 ರಲ್ಲೇ ಭೂಮಿ ನೀಡಿತ್ತು. ಆದರೆ ಈ ವರೆಗೂ ಯಾವುದೇ ಪ್ರಗತಿ ಕಾರ್ಯಗಳು ಅಭಿವೃದ್ಧಿಗೊಂಡಿಲ್ಲ. ಕಾಂಗ್ರೆಸ್ ಹಿಂದಿನ ತಲೆಮಾರಿನಿಂದ ಇದ್ದ ಕನಸನ್ನು ಇದೀಗ ನರೇಂದ್ರ ಮೋದಿ ಸರ್ಕಾರ ನನಸು ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ಅಮೇಥಿ ಭೇಟಿ ನೀಡಿದ್ದರಿಂದಾಗಿ ತಾವು ಸಹ ಅಮೇಥಿಗೆ ಭೇಟಿ ನೀಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಸ್ಮೃತಿ ಇರಾನಿ, ರಾಹುಲ್ ಗಾಂಧಿ ಅಮೇಥಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿತ್ತು. ಆದರೆ ನಾನು ಭೇಟಿ ನೀಡುವುದು ಈ ವರೆಗೂ ಯಾರಿಗೂ ತಿಳಿದಿರಲಿಲ್ಲ.

ಅಮೇಥಿ ವಿಧಾನಸಭಾ ಕ್ಷೇತ್ರದ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಅಮೇಥಿಗೆ ಭೇಟಿ ನೀಡಿ ಇಲ್ಲಿನ ಜನರ ಸಂಕಷ್ಟಗಳನ್ನು ಕೇಳುತ್ತಿರಲಿಲ್ಲ. ನನ್ನ ಭೇಟಿಯ ನಂತರವಾದರೂ ಅಮೇಥಿ ಜನರಿಗೆ ರಾಹುಲ್ ಗಾಂಧಿ ಅವರ ದರ್ಶನವಾಗುತ್ತಿದೆ ಎಂಬುದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT