ಮದುವೆ ಮೆರವಣಿಗೆ 
ದೇಶ

ಮದುವೆ ಮೆರವಣಿಗೆ ವೇಳೆ ಹೆಲ್ಮೆಟ್ ಧರಿಸಿದ ದಲಿತ ವರ, ಕಲ್ಲು ತೂರಿದ ಗ್ರಾಮಸ್ಥರು

ಮದುವೆ ಮೆರವಣಿಗೆಗೆ ಸಾಮಾನ್ಯವಾಗಿ ಮಾಡಬೇಕಾದ ಎಲ್ಲಾ ಸಿದ್ಧತೆಗಳ ಜೊತೆಗೆ ಕುದುರೆ ಮೇಲೆ ಮೆರವಣಿಗೆ ಹೋಗುತ್ತಿದ್ದ ವರನಿಗೆ ಬಲವಂತವಾಗಿ...

ಮದುವೆ ಮೆರವಣಿಗೆಗೆ ಸಾಮಾನ್ಯವಾಗಿ ಮಾಡಬೇಕಾದ ಎಲ್ಲಾ ಸಿದ್ಧತೆಗಳ ಜೊತೆಗೆ ಕುದುರೆ ಮೇಲೆ ಮೆರವಣಿಗೆ ಹೋಗುತ್ತಿದ್ದ ವರನಿಗೆ ಬಲವಂತವಾಗಿ ಒಂದು ಗಟ್ಟಿಮುಟ್ಟಾದ ಹೆಲ್ಮೆಟ್ ಹಾಕಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ವರ ದಲಿತನಾಗಿದ್ದೆ ಇದಕ್ಕೆ ಕಾರಣ. ಈ ಗ್ರಾಮದಲ್ಲಿ ದಲಿತರು ಅದ್ಧೂರಿ ಮದುವೆ ಮೆರವಣಿಗೆ ಅಥವಾ ಕುದುರೆ ಸವಾರಿ ಮಾಡುವಂತಿಲ್ಲ. ಆದರೆ ವರ ಪವನ್ ಮಾಳವೀಯ ತಾನು ದಲಿತನಾಗಿದ್ದರೂ ಗ್ರಾಮಸ್ಥರನ್ನು ಎದುರು ಹಾಕಿಕೊಂಡು ಕುದುರೆ ಮೇಲೆ ಮೆರವಣಿಗೆ ಹೋರಟಿದ್ದ. ಇದು ಮೇಲ್ವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನು ಅರಿತ ವರನ ತಂದೆ ತಮ್ಮ ಮಗನ ಮೇಲೆ ಮೇಲ್ವರ್ಗದ ಜನ ಕಲ್ಲು ತೂರಬಹುದು ಎಂಬ ಭಯದಿಂದ ಮಗನಿಗೆ ಬಲವಂತವಾಗಿ ಹೆಲ್ಮೆಟ್ ಹಾಕಿಸಿದ್ದರು ಎಂದು ವರದಿ ಮಾಡಲಾಗಿದೆ.

ಭಾನುವಾರ ರಾತ್ರಿ ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಮೆರವಣಿಗೆಯನ್ನು ಅರ್ಧಕ್ಕೆ ತಡೆದ ಮೇಲ್ಜಾತಿ ಪುರುಷರು, ವರನ ಮೇಲೆ ಕಲ್ಲು ತೂರಾಟ ನಡೆಸಿ, ಕುಟುಂಬ ಸದಸ್ಯರ ಮೇಲೂ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ವರನ ಕುಟುಂಬದ ಹಲವರಿಗೆ ಗಾಯಗಳಾಗಿವೆ.

ಮೆರವಣಿಗೆಯನ್ನು ಕೆಲ ಸಮಯ ಸ್ಥಗಿತಗೊಳಿಸಿ, ಬಳಿಕ ಪೊಲೀಸ್ ರಕ್ಷಣೆಯಲ್ಲಿ ಮುಂದುವರೆಸಲಾಯಿತು. ಘಟನೆ ಸಂಬಂಧ ಪೊಲೀಸರು 30 ಗ್ರಾಮಸ್ಥರನ್ನು ಬಂಧಿಸಿದ್ದು, ಅವರ ವಿರುದ್ಧ ಅಟ್ರೊಸಿಟಿ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT