ರಾಜ್ಯಸಭೆ 
ದೇಶ

ಭೂಸ್ವಾಧೀನ ವಿಧೇಯಕ ಸಮಿತಿಗೆ ರಾಜ್ಯಸಭೆಯಿಂದ 10 ಸದಸ್ಯರ ನೇಮಕ

ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಭೂಸ್ವಾಧೀನ ವಿಧೇಯಕವನ್ನು ಸಂಸತ್ತಿನ ಜಂಟಿ ಸಮಿತಿ...

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಭೂಸ್ವಾಧೀನ ವಿಧೇಯಕವನ್ನು ಸಂಸತ್ತಿನ ಜಂಟಿ ಸಮಿತಿ ಪರಿಶೀಲನೆಗೆ ಒಪ್ಪಿಸಿದ್ದು, ಇಂದು ಈ ಸಮಿತಿಗೆ ರಾಜ್ಯಸಭೆಯಿಂದ 10 ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಯಿಂದ ಪ್ರಭಾತ್ ಜಾ ಮತ್ತು ರಾಮ್ ನರೇನ್ ದುದಿ, ಕಾಂಗ್ರೆಸ್‌ನಿಂದ ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್ ಮತ್ತು ಪಿ.ಎಲ್.ಪುನಿಯಾ, ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್, ಜೆಡಿಯುನಿಂದ ಶರದ್ ಯಾದವ್, ತೃಣಮೂಲ ಕಾಂಗ್ರೆಸ್‌ನಿಂದ ಡೆರೆಕ್ ಒಬ್ರೇನ್, ಬಿಎಸ್‌ಪಿಯಿಂದ ರಾಜಪಾಲ್ ಸಿಂಗ್ ಸೈನಿ ಮತ್ತು ಎನ್‌ಸಿಪಿಯಿಂದ ಶರದ್ ಪವಾರ್ ಅವರನ್ನು ಸಂಸತ್ತಿನ ಜಂಟಿ ಸಮಿತಿಗೆ ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಸ್ವಾಧೀನ ವಿಧೇಯಕ ಸಂಬಂಧ ನಿನ್ನೆ ಲೋಕಸಭೆ 30 ಸದಸ್ಯರ ಜಂಟಿ ಸಮಿತಿ ರಚಿಸಿತ್ತು. ಲೋಕಸಭೆ ಮತ್ತು ರಾಜ್ಯಸಭೆ ಜಂಟಿ ಸಮಿತಿ ಈ ವಿಧೇಯಕವನ್ನು ಪರಿಶೀಲಿಸಿ ಮುಂಗಾರು ಅಧಿವೇಶನದ ಮೊದಲ ದಿನ ತನ್ನ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

SCROLL FOR NEXT