ರಾಜ್ಯಸಭೆ 
ದೇಶ

ಭೂಸ್ವಾಧೀನ ವಿಧೇಯಕ ಸಮಿತಿಗೆ ರಾಜ್ಯಸಭೆಯಿಂದ 10 ಸದಸ್ಯರ ನೇಮಕ

ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಭೂಸ್ವಾಧೀನ ವಿಧೇಯಕವನ್ನು ಸಂಸತ್ತಿನ ಜಂಟಿ ಸಮಿತಿ...

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧ ಹಾಗೂ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಭೂಸ್ವಾಧೀನ ವಿಧೇಯಕವನ್ನು ಸಂಸತ್ತಿನ ಜಂಟಿ ಸಮಿತಿ ಪರಿಶೀಲನೆಗೆ ಒಪ್ಪಿಸಿದ್ದು, ಇಂದು ಈ ಸಮಿತಿಗೆ ರಾಜ್ಯಸಭೆಯಿಂದ 10 ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿಯಿಂದ ಪ್ರಭಾತ್ ಜಾ ಮತ್ತು ರಾಮ್ ನರೇನ್ ದುದಿ, ಕಾಂಗ್ರೆಸ್‌ನಿಂದ ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್ ಮತ್ತು ಪಿ.ಎಲ್.ಪುನಿಯಾ, ಸಮಾಜವಾದಿ ಪಕ್ಷದಿಂದ ರಾಮ್ ಗೋಪಾಲ್ ಯಾದವ್, ಜೆಡಿಯುನಿಂದ ಶರದ್ ಯಾದವ್, ತೃಣಮೂಲ ಕಾಂಗ್ರೆಸ್‌ನಿಂದ ಡೆರೆಕ್ ಒಬ್ರೇನ್, ಬಿಎಸ್‌ಪಿಯಿಂದ ರಾಜಪಾಲ್ ಸಿಂಗ್ ಸೈನಿ ಮತ್ತು ಎನ್‌ಸಿಪಿಯಿಂದ ಶರದ್ ಪವಾರ್ ಅವರನ್ನು ಸಂಸತ್ತಿನ ಜಂಟಿ ಸಮಿತಿಗೆ ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಸ್ವಾಧೀನ ವಿಧೇಯಕ ಸಂಬಂಧ ನಿನ್ನೆ ಲೋಕಸಭೆ 30 ಸದಸ್ಯರ ಜಂಟಿ ಸಮಿತಿ ರಚಿಸಿತ್ತು. ಲೋಕಸಭೆ ಮತ್ತು ರಾಜ್ಯಸಭೆ ಜಂಟಿ ಸಮಿತಿ ಈ ವಿಧೇಯಕವನ್ನು ಪರಿಶೀಲಿಸಿ ಮುಂಗಾರು ಅಧಿವೇಶನದ ಮೊದಲ ದಿನ ತನ್ನ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT