ಗಂಗಾನದಿ 
ದೇಶ

ಗಂಗಾನದಿ ಶುದ್ಧೀಕರಣಕ್ಕೆ 20 ಸಾವಿರ ಕೋಟಿ ಹಣ: ಕೇಂದ್ರ ಸಂಪುಟ ಸಭೆ ತೀರ್ಮಾನ

ಕೇಂದ್ರ ಎನ್ ಡಿ ಎ ಸರ್ಕಾರದ ಮಹತ್ವಾಕಾಂಕ್ಷೆಯ ಗಂಗಾ ನದಿ ಶುದ್ಧೀಕರಣ ಯೋಜನೆಗೆ ಸರ್ಕಾರ 20 ಸಾವಿರ ಕೋಟಿ ಮೀಸಲಿಡಲು ನಿರ್ಧರಿಸಿದೆ.

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರದ ಮಹತ್ವಾಕಾಂಕ್ಷೆಯ ಗಂಗಾ ನದಿ ಶುದ್ಧೀಕರಣ ಯೋಜನೆಗೆ ಸರ್ಕಾರ 20 ಸಾವಿರ ಕೋಟಿ ಮೀಸಲಿಡಲು ನಿರ್ಧರಿಸಿದೆ. ದೇಶದ ಅತಿ ದೊಡ್ಡ ಹಾಗೂ ಪವಿತ್ರ ನದಿಗಳಲ್ಲಿ ಒಂದಾಗಿರುವ ಗಂಗಾ ನದಿ ಶುದ್ಧೀಕರಣಕ್ಕೆ ಮುಂದಿನ 5 ವರ್ಷಗಳಲ್ಲಿ 20 ಸಾವಿರ ಕೋಟಿ ವೆಚ್ಚ ಮಾಡಲು ಸರ್ಕಾರ ನಿರ್ಧರಿಸಿದೆ.

ನಮಗಾಗಿ ಗಂಗಾ ಎಂಬ ಕಾರ್ಯಕ್ರಮಕ್ಕೆ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಗಂಗಾ ನದಿ ಶುದ್ಧೀಕರಣಕ್ಕೆ 20 ಸಾವಿರ ಕೋಟಿ ಹಣ ಬಿಡುಗಡೆ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕಳೆದ ವರ್ಷ ಬಜೆಟ್ ನಲ್ಲಿ ಮೋದಿ ಸರ್ಕಾರ ಗಂಗಾನದಿ ಶುದ್ಧೀಕರಣಕ್ಕಾಗಿ 2037 ಕೋಟೀ ಹಣ ಬಿಡುಗಡೆ ಮಾಡಿತ್ತು. ರಾಷ್ಟ್ರೀಯ ಗಂಗಾನದಿ ಜಲಾನಯನ ಪ್ರಾಧಿಕಾರ, ಜಲ ಸಂಪನ್ಮೂಲ ಹಾಗೂ ನದಿ ಅಭಿವೃದ್ಧಿ ಸಚಿವಾಲಯ, ಗಳ ಸಹಯೋಗದಲ್ಲಿ ನಮಗಾಗಿ ಗಂಗಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಒಟ್ಟಾರೆ ಗಂಗಾನದಿಯ ಶುದ್ಧೀಕರಣಕ್ಕೆ ಹೆಚ್ಚಿನ ಹಣದ ಅವಶ್ಯಕತೆಯಿರುವುದನ್ನು ಮನಗಂಡ ಕೇಂದ್ರ ಸರ್ಕಾರ 20 ಸಾವಿರ ಕೋಟಿ ನೀಡಲು ಒಪ್ಪಿಗೆ ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT