ರಾಬರ್ಟ್ ವಾದ್ರಾ 
ದೇಶ

ಸೋನಿಯಾ ಅಳಿಯಾ ರಾಬರ್ಟ್ ವಾದ್ರಾಗೆ ಸಂಕಷ್ಟ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಸಂಕಷ್ಟ ಎದುರಾಗಿದೆ....

ಚಂಡೀಘಡ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಸಂಕಷ್ಟ ಎದುರಾಗಿದೆ.
ಡಿಎಲ್ ಎಫ್ ಕಂಪನಿಗೆ ಕಾನೂನು ಬಾಹಿರವಾಗಿ ಭೂಮಿ ನೀಡಿರುವ ಬಗ್ಗೆ ತನಿಖೆ ನಡೆಸಲು  ಹರ್ಯಾಣ ಸರ್ಕಾರ ಉನ್ನತ ಮಟ್ಟದ ಆಯೋಗ ರಚಿಸಿದೆ.
ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖತ್ತಾರ್, ನಿವೃತ್ತ ನ್ಯಾಯಮೂರ್ತಿ ಸ್ವತೇಂತ್ರ ಕುಮಾರ್ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದಾರೆ.
ಹಿಂದೆ ಹರ್ಯಾಣ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ನ ಭೂಪಿಂದರ್ ಸಿಂಗ್ ಹೂಡಾ ಸೋನಿಯಾ ಅಳಿಯಾ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಬಿಲ್ಡರ್ಸ್ ಗಳಿಗೆ ಭೂಮಿ ನೀಡಿ ಅನುಕೂಲ ಮಾಡಿಕೊಟ್ಟಿದ್ದರು.
2008 ರಲ್ಲಿ ಡಿಎಲ್ ಎಫ್ ಕಂಪನಿಗೆ ಗುರಗಾವ್ ಜಿಲ್ಲೆಯ ಮನೇಸರ್ ನಲ್ಲಿ 58 ಕೋಟಿಗೆ ಮಾರಾಟ ಮಾಡಲಾಗಿತ್ತು. 2013 - 14 ರಲ್ಲಿ ಸಿಎಜಿ ನೀಡಿದ ವರದಿಯಲ್ಲಿ ಎಲ್ಲಿಯೂ ರಾಬರ್ಟ್ ವಾದ್ರ ಹೆಸರನ್ನು ಉಲ್ಲೇಖಿಸಿಲ್ಲ, ವಾದ್ರಾ ಒಡೆತನದ ಸ್ಕೈಲೈಟ್ ಹಾಸ್ಪಿಟಾಲಿಟಿ ವಿರುದ್ಧ ವರದಿ ನೀಡಲಾಗಿತ್ತು.
ಡಿಎಲ್ ಎಫ್ ಕಂಪನಿಗೆ ಕಾನೂನುಬಾಹಿರವಾಗಿ ಭೂಮಿ ನೀಡಲಾಗಿದೆ ಎಂದು ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ತನಿಖೆಗೆ ಆದೇಶಿಸಿದ್ದರು. ಆದರೆ ಹಿಂದಿದ್ದ ಹೂಡಾ ಸರ್ಕಾರ, ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ರಾಬರ್ಟ್ ವಾದ್ರಾಗೆ ಕ್ಲೀನ್ ಚಿಟ್ ನೀಡಿತ್ತು. ಈಗ ಮತ್ತೆ ಬಿಜೆಪಿ ಸರ್ಕಾರ ಹರ್ಯಾಣದಲ್ಲಿ ಅಧಿಕಾರಗದ ಚುಕ್ಕಾಣಿ ಹಿಡಿದಿರುವುದರಿಂದ ಪ್ರಕರಣದ ಸಮಗ್ರ ತನಿಖೆಗೆ ಆಯೋಗ ರಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT