ಸಾಂದರ್ಭಿಕ ಚಿತ್ರ 
ದೇಶ

ಭಾರತದ 37 ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಆದೇಶ

ಶ್ರೀಲಂಕಾದ ವಿವಿಧ ಭಾಗಗಳಲ್ಲಿ ಜೈಲುವಾಸ ಅನುಭವಿಸುತ್ತಿರುವ ಭಾರತದ 37 ಮೀನುಗಾರರನ್ನು ಬಿಡುಗಡೆ ಮಾಡಲು ಶ್ರೀಲಂಕಾ...

ಕೊಲಂಬೊ: ಶ್ರೀಲಂಕಾದ ವಿವಿಧ ಭಾಗಗಳಲ್ಲಿ ಜೈಲುವಾಸ ಅನುಭವಿಸುತ್ತಿರುವ ಭಾರತದ 37 ಮೀನುಗಾರರನ್ನು ಬಿಡುಗಡೆ ಮಾಡಲು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಆದೇಶ ನೀಡಿದ್ದಾರೆ.

ರಾಮೇಶ್ವರಂ ನ ಮೀನುಗಾರರ ಸಂಘದ ಅಧ್ಯಕ್ಷ ಟಿ. ಸೇಸುರಾಜ ನೇತೃತ್ವದ 5 ಸದಸ್ಯರಿದ್ದ ನಿಯೋಗದೊಂದಿಗೆ ಮಾತುಕತೆ ನಡೆಸಿದ ಬಳಿಕ ಶ್ರೀಲಂಕಾ ಅಧ್ಯಕ್ಷರು ಈ ಆದೇಶ ಪ್ರಕಟಿಸಿದ್ದಾರೆ.

ಮೀನುಗಾರರ ಬಿಡುಗಡೆಗೆ ಆದೇಶ ನೀಡಲಾಗಿದೆಯಾದರೂ ಬಿಡುಗಡೆಯ ದಿನಾಂಕ ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೆ, ಬಂಧಿತ ಮೀನುಗಾರರು ಬಳಸುತ್ತಿದ್ದ ಬೋಟ್ ಗಳನ್ನು ಬಿಡುಗಡೆ ಮಾಡುವ ಬಗ್ಗೆಯೂ ಮಾಹಿತಿ ಸ್ಪಷ್ಟವಾಗಿಲ್ಲ.

ಲಂಕಾ ಅಧ್ಯಕ್ಷರೊಂದಿಗೆ ನಡೆದ ಚರ್ಚೆ ಬಗ್ಗೆ ವಿವರಣೆ ನೀಡಿರುವ ರಾಮೇಶ್ವರಂ ನ ಮೀನುಗಾರರ ಸಂಘದ ಅಧ್ಯಕ್ಷ ಸೇಸುರಾಜ, ಮೀನುಗಾರರನ್ನು ಬಿಡುಗಡೆ ಮಾಡಲು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಆದೇಶ ನೀಡಿದ್ದಾರೆ. ಆದರೆ ಬಂಧಿತ ಮೀನುಗಾರರಿಂದ ವಶಪಡಿಸಿಕೊಳ್ಳಲಾಗಿರುವ ದೋಣಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಲಂಕಾ ಅಧ್ಯಕ್ಷರು ಆದೇಶದಲ್ಲಿ ಪ್ರಸ್ತಾಪಿಸಿಲ್ಲ ಎಂದಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಇರುವ ಪಾಲ್ಕ್ ಸ್ಟ್ರೇಟ್‌ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರನ್ನು ಶ್ರೀಲಂಕಾ ನೌಕಾಪಡೆ ಪದೇ ಪದೇ ಬಂಧಿಸುತ್ತಿದ್ದ ಹಿನ್ನೆಲೆಯಲ್ಲಿ, ಪಾಲ್ಕ್ ಸ್ಟ್ರೇಟ್‌ನಲ್ಲಿ ತಮಿಳುನಾಡಿನ ಮೀನುಗಾರರು ಮೀನುಗಾರಿಕೆ ನಡೆಸಲು ಅನುಮತಿ ಪಡೆದಿರುವುದಾಗಿ ನಿಯೋಗದಲ್ಲಿದ್ದ ಸದಸ್ಯ ಎನ್ ದೇವದಾಸ್ ತಿಳಿಸಿದ್ದಾರೆ.

ಪಾಲ್ಕ್ ಸ್ಟ್ರೇಟ್‌ ನಲ್ಲಿ ತಮಿಳುನಾಡಿನ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರನ್ನು ಭೇಟಿ ಮಾಡಿರುವುದಾಗಿ ಸೇಸುರಾಜ ತಿಳಿಸಿದ್ದಾರೆ.  ಶ್ರೀಲಂಕಾ ಹಾಗೂ ತಮಿಳುನಾಡಿನ ಮೀನುಗಾರ ನಡುವಿನ ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT